ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದೆ.
ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಜತೆ ಡೀಲ್ ನಡೆಸಿದ್ದರೆನ್ನುವ ಆರೋಪ ಹಿಲೋರಿ ಅವರ ಮೇಲಿದ್ದು ಈ ಬಗ್ಗೆ ವಿಚಾರಣೆ ನಡೆಸಲು ಸಿಬಿಐ ಹಿಲೋರಿಗೆ ನೋಟೀಸ್ ಕೊಟ್ಟಿದೆ.
ಪ್ರಕರಣಕ್ಕೆ ಸಂಬಂಧಿಸಿ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ (ಹೆಚ್ಚುವರಿ ಪೊಲೀಸ್ ಆಯುಕ್ತ [ಆಡಳಿತ], ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್) ಮತ್ತು ಅಜಯ್ ಹಿಲೋರಿ (ಕೆಎಸ್ಆರ್ಪಿ ಕಮಾಂಡೆಂಟ್) ಅವರುಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರ ಈ ಹಿಂದೆ ಅನುಮತಿ ನೀಡೀತ್ತು.
Advertisement