ಐಎಂಎ ಹಗರಣ: ಪಿ.ಡಿ.ಕುಮಾರ್ ಗೆ ಷರತ್ತುಬದ್ಧ ಜಾಮೀನು

 ಐ ಮಾನಿಟರಿ ಅಡ್ವೈಸರಿ (ಐಎಂಎ) ಬಹುಕೋಟಿ ಹಗರಣದಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದ ಪಿಡಿ ಕುಮಾರ್ ಅಲಿಯಾಸ್ ಬಿಡಿಎ ಕುಮಾರ್ ಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಐಎಂಎ ಹಗರಣ: ಪಿ.ಡಿ.ಕುಮಾರ್ ಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ಬಹುಕೋಟಿ ಹಗರಣದಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದ ಪಿಡಿ ಕುಮಾರ್ ಅಲಿಯಾಸ್ ಬಿಡಿಎ ಕುಮಾರ್ ಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು 2 ಶ್ಯೂರಿಟಿ, 5 ಲಕ್ಷ ಬಾಂಡ್, ಸಾಕ್ಷ್ಯನಾಶ ಮಾಡದಂತೆ ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಐಎಂಎ ಸ್ಥಾಪಕ ಮನ್ಸೂರ್ ಖಾನ್ ಬಳಿ 3-4 ಕೋಟಿ ಹಣ ಪಡೆದ ಆರೋಪ ಕುಮಾರ್ ಮೇಲಿದ್ದು ಅವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿ ಬಂಧಿಸಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com