ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಖಾಸಗಿ ಬಸ್ಸೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸರ್ಕಾರಿ ಅತಿಥಿಗೃಹದ ಮುಂಭಾಗದಲ್ಲಿ ಸಂಭವಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ಬೈಕ್ ಗೆ ಖಾಸಗಿ ಬಸ್ಸೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸರ್ಕಾರಿ ಅತಿಥಿಗೃಹದ ಮುಂಭಾಗದಲ್ಲಿ ಸಂಭವಿಸಿದೆ.

ಮೃತನನ್ನು ಮೈಸೂರಿನ ಕೆಸರೆ ನಿವಾಸಿ ಆನಂದ್ (28) ಎಂದು ಗುರುತಿಸಲಾಗಿದೆ.ಖಾಸಗಿ ಸಂಸ್ಥೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆನಂದ್ ಬೈಕ್ನಲ್ಲಿ ಕೆಎಸ್ಆರ್ಟಿಸಿ ಗ್ರಾಮಾಂತರ ಬಸ್ಸು ನಿಲ್ದಾಣ ಕಡೆಯಿಂದ ತೆರಳುತ್ತಿದ್ದಾಗ ಈ ವೇಳೆ ಸರ್ಕಾರಿ ಅತಿಥಿಗೃಹ ಮುಂಭಾಗದ ಸಿಗ್ನಲ್ ಜಂಕ್ಷನ್ನಲ್ಲಿ, ಹಿಂದಿನಿಂದ ಬಂದ ಖಾಸಗಿ ಬಸ್ಸು ಬೈಕ್ ಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಬಸ್ಸಿನ ಹಿಂಬದಿಯ ಚಕ್ರದಡಿ ಸಿಲುಕಿ ಆನಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೇವರಾಜ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com