ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ‌ ಯುವಕನ ಕೊಲೆ

ಮಾರಕಾಸ್ತ್ರಗಳಿಂದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಂದ್ರಾ ಲೇಔಟ್ ನ ಗಂಗೋಡನಹಳ್ಳಿಯಲ್ಲಿ ಕಳೆದ ರಾತ್ರಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಾರಕಾಸ್ತ್ರಗಳಿಂದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಂದ್ರಾ ಲೇಔಟ್ ನ ಗಂಗೋಡನಹಳ್ಳಿಯಲ್ಲಿ ಕಳೆದ ರಾತ್ರಿ ನಡೆದಿದೆ.

ಗಂಗೋಡನಹಳ್ಳಿಯ ಸಾಹಿಲ್ ಕೊಲೆಯಾದವರು. ಸಾಹೀಲ್ ಮನೆಯ ಸಮೀಪದ ಮಾರಮ್ಮನ ದೇವಸ್ಥಾನ ಬಳಿ ರಾತ್ರಿ 12 ಗಂಟೆಯ ವೇಳೆ ಮೂವರು ಯುವಕರ ನಡುವೆ ಕ್ಲುಲಕ‌‌ ಕಾರಣಕ್ಕೆ ಜಗಳ ಉಂಟಾಗಿದೆ. ಗಲಾಟೆಯು ವಿಕೋಪಕ್ಕೆ ತಿರುಗಿದಾಗ, ಎದುರಾಳಿಗಳು ಸಾಹಿಲ್‌ ನ ಮೇಲೆ  ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡ ಸಾಹಿಲ್ ನನ್ನು ಕಿಮ್ಸ್ ಅಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಾಲೇಔಟ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com