ಮಂಡ್ಯ: ನಾಲೆಯಲ್ಲಿ ಕೆಲಸ ಮಾಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲೂಕಿನ ದೇವೇಗೌಡ ಕೊಪ್ಪಲು ಗ್ರಾಮದ ಬಳಿ ನಡೆದಿದೆ.
ಮಹೇಶ್(೨೮) ಮೃತ ಕಾರ್ಮಿಕನಾಗಿದ್ದು, ಈತ ಮೂಲತಃ ಚಾಮರಾಜನಗರ ಜಿಲ್ಲೆಯ ಬೇಗೂರಿನ ನಿವಾಸಿ ಎಂದು ತಿಳಿದು ಬಂದಿದೆ.
ಎಂದಿನಂತೆಯೇ ಶುಕ್ರವಾರ ಬೆಳಗ್ಗೆ ದೇವೇಗೌಡ ಕೊಪ್ಪಲು ಗ್ರಾಮದ ಬಳಿ ನಡೆಯುತ್ತಿದ್ದ ನಾಲೆಯ ಕೆಲಸಕ್ಕೆ ತೆರಳಿದ್ದರು. ಸಂಜೆ ಕೆಲಸ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆಯೆ ನಾಲೆವಾಡೆಯ ಮಣ್ಣುರಾಶಿ ಮಹೇಶ್ ಮೇಲೆ ಕುಸಿದು ಬಿದ್ದಿದೆ. ಗಾಯಗೊಂಡಿದ್ದ ಕಾರ್ಮಿಕ ಮಹೇಶ್ನನ್ನು ಸ್ಥಳೀಯ ಪಾಂಡವಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ. ಈ ಸಂಬಂಧ ಪಾಂಡವಪುರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
-ನಾಗಯ್ಯ
Advertisement