ಬೆಂಗಳೂರು: ಮಾದಕ ವಸ್ತುಮಾರಾಟ ಜಾಲ ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವನ ಸಹೋದರಿ ಹಾಗೂ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಆಳ್ವ ಶುಕ್ರವಾರ ಗೈರು ಹಾಜರಾಗಿದ್ದಾರೆ.
ತಮ್ಮ ಸಹೋದರನಿಗೆ ಆಶ್ರಯ ನೀಡಿದ ಆರೋಪ ಎದುರಿಸುತ್ತಿರುವ ಪ್ರಿಯಾಂಕಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ಜಾರಿ ಮಾಡಿತ್ತು.
ಮುಂಬೈನ ಜುಹು ಪ್ರದೇಶದಲ್ಲಿರುವ ಅವರ ಮನೆ ಮೇಲೆ ಗುರುವಾರ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೂಡ ನಡೆಸಿದ್ದರು. ಈ ವೇಳೆ ನೋಟಿಸ್ ಸ್ವೀಕರಿಸಲು ನಿರಾಕರಿಸಿದ ಪ್ರಿಯಾಂಕಾ ಅವರಿಗೆ ವಾಟ್ಸ್'ಆ್ಯಪ್ ಮೂಲಕ ಸಿಸಿಬಿಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದರು. ಹೀಗಿದ್ದೂ ವಿಚಾರಣೆಗೆ ಗೈರಾಗಿದ್ದಾರೆಂದು ತಿಳಿದುಬಂದಿದೆ.
Advertisement