ಬೆಂಗಳೂರು: ಅಗ್ನಿ ಅವಘಡ, ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್ ಭಸ್ಮ

ಬೆಂಗಳೂರು ನಗರ ಬಸವನಗುಡಿ ಸಮೀಪದ ನೆಟ್ಕಲ್ಲಪ್ಪ ಸರ್ಕಲ್ ನಲ್ಲಿರುವ ದಾವಣಗೆರೆ ಬೆಣ್ಣೆದೋಸೆ ಹೋಟೆಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. 
ಬೆಂಕಿಯ ದೃಶ್ಯ
ಬೆಂಕಿಯ ದೃಶ್ಯ

ಬೆಂಗಳೂರು:  ಬೆಂಗಳೂರು ನಗರ ಬಸವನಗುಡಿ ಸಮೀಪದ ನೆಟ್ಕಲ್ಲಪ್ಪ ಸರ್ಕಲ್ ನಲ್ಲಿರುವ ದಾವಣಗೆರೆ ಬೆಣ್ಣೆದೋಸೆ ಹೋಟೆಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. 

ಹೋಟೆಲ್ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು ಈ ವೇಳೆ ಹೋಟೆಲ್ನಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ವಿಷಯ ಅರಿತು ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ.

ಶಾರ್ಟ್ ಸರ್ಕ್ಯೂಟ್ ಅಥವಾ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಬಸವನಗುಡಿ ಪೋಲೀಸರು ಪರಿಶೀಲನೆ ನಡೆಸಿದ್ದಾರೆ. ಆದರೆ ಈ ಬಗ್ಗೆ ಯಾವ ಪ್ರಕರಣ ದಾಖಲಾಗಿಲ್ಲವೆಂದು ಅವರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com