ಹಿರಿಯ ನಟ ಮುಖ್ಯಮಂತ್ರಿ ಚಂದ್ರುಗೆ 'ಮುರುಘಾಶ್ರೀ ಪ್ರಶಸ್ತಿ'

ರಂಗಭೂಮಿ, ಸಿನಿಮಾ ಕ್ಷೇತ್ರದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಸೇರಿ ಐವರನ್ನು ಈ ಸಾಲಿನ "ಮುರುಘಾಶ್ರೀ ಪ್ರಶಸ್ತಿ" ಗೆ ಆಯ್ಕೆ ಮಡಲಾಗಿದೆ.
ಮುಖ್ಯಮಂತ್ರಿ ಚಂದ್ರು
ಮುಖ್ಯಮಂತ್ರಿ ಚಂದ್ರು

ಚಿತ್ರದುರ್ಗ: ರಂಗಭೂಮಿ, ಸಿನಿಮಾ ಕ್ಷೇತ್ರದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಸೇರಿ ಐವರನ್ನು ಈ ಸಾಲಿನ "ಮುರುಘಾಶ್ರೀ ಪ್ರಶಸ್ತಿ" ಗೆ ಆಯ್ಕೆ ಮಡಲಾಗಿದೆ.

ಅಕ್ಟೋಬರ್ 24ರಂದು ಚಿತ್ರದುರ್ಗದ ಮುರುಘಾ ಮಠದ "ಶರಣ ಸಂಸ್ಕೃತಿ ಉತ್ಸವ"ದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು "ರಂಗಭೂಮಿ, ಸಿನಿಮಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಹಿರಿಯ ನಟ್ ಅಮುಖ್ಯಮಂತ್ರಿ ಚಂದ್ರು ಸೇರಿ ಐವರಿಗೆ ಈ ಸಾಲಿನ ಮುರುಘಾಶ್ರೀ ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಿದ್ದೇವೆ" ಎಂದರು. 

ಮುಖ್ಯಮಂತ್ರಿ ಚಂದ್ರು ಅವರೊಂದಿಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್. ಬಿಲ್ಲಪ್ಪ, ಹುಲುಸೂರು ಗುರುಬಸವೇಶ್ವರ ಮಠದ ಶಿವಾನಂದ ಸ್ವಾಮೀಜಿ, ಮದ್ಯಪಾನ ವಿರುದ್ಧ ಹೋರಾಟದಲ್ಲಿ ಸಕ್ರಿಯವಾಗಿರುವ ಸ್ವರ್ಣ ಭಟ್ ಹಾಗೂ ಧರ್ಮದರ್ಶಿ ಎಸ್‌.ಷಣ್ಮುಖಪ್ಪ ಅವರುಗಳು ಈ ಗೌರವಕ್ಕೆ ಪಾತ್ರವಾಗಿದ್ದಾರೆ.

ಮುರುಘಾಶ್ರೀ ಪ್ರಶಸ್ತಿಯು 25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.

ಹರಿಯಾಣದ ಯುವತಿಗೆ ‘ಭರಮಣ್ಣನಾಯಕ ಶೌರ್ಯ ಪ್ರಶಸ್ತಿ'

ಹತ್ತು ಭಾಷೆಯಲ್ಲಿ  ನಿರರ್ಗಳವಾಗಿ ಮಾತನಾಡಬಲ್ಲ ಸಾಮರ್ಥ್ಯ ಹೊಂದಿರುವ ಹರಿಯಾಣದ ಜಾಹ್ನವಿ ಪನ್ವಾರ್‌(17) ಅವರಿಗೆ ಈ ಸಾಲಿನ ಭರಮಣ್ಣನಾಯಕ ಶೌರ್ಯ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com