ಮಂಗಳೂರು: ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ವಿಟ್ಲ ಪೇಟೆಯಲ್ಲಿ ನಡೆದಿದೆ.
ವಿಟ್ಲದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸಮೀಪದ ಕೆಜಿ ಟವರ್ಸ್ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡವಾಗಿದ್ದು ಎಂಪಿ ಹಾರ್ಡ್ ವೇರ್ ಹಾಗೂ ಪೇಂಟ್ ಮತ್ತೊಂದು ಬೇಕರಿ ಸುಟ್ಟು ಕರಕಲಾಗಿದೆ.
ಮೊದಲು ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ನಂತರದಲ್ಲಿ ಪಕ್ಕದಲ್ಲಿನ ಬೇಕರಿಗೆ ವ್ಯಾಪಿಸಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.
Advertisement