ರೌಡಿ ಶೀಟರ್ ಬರ್ಬರ ಕೊಲೆ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಶಂಕೆ

ರೌಡಿಶೀಟರ್ನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ಘಟನೆ ನಡೆದಿದೆ.
ರೌಡಿ ಶೀಟರ್ ಬರ್ಬರ ಕೊಲೆ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಶಂಕೆ
ರೌಡಿ ಶೀಟರ್ ಬರ್ಬರ ಕೊಲೆ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಶಂಕೆ

ಮಂಡ್ಯ: ರೌಡಿಶೀಟರ್ನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ಘಟನೆ ನಡೆದಿದೆ. ಪಾಲಹಳ್ಳಿಯ ಹರೀಶ್ ಕಳ್ಳಪಚ್ಚಿ ಭೀಕರವಾಗಿ ಕೊಲೆಯಾಗಿರುವ ರೌಡಿಶೀಟರ್ ಆಗಿದ್ದಾನೆ. 

ಗುರುವಾರ ರಾತ್ರಿ ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುವ ವೇಳೆ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಹರೀಶ್ನನ್ನು ಕಣ್ಣಿಗೆ ಖಾರದ ಪುಡಿ ಎರಚಿ ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. 

ಸುದ್ದಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಹರೀಶ್ ಮೃತದೇಹವನ್ನು ಪೊಲೀಸರು ಪರಿಶೀಲಿಸಿದ ಬಳಿಕ ಶವಾಗಾರಕ್ಕೆ ರವಾನಿಸಿದರು.

ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ. ನಡು ರಸ್ತೆಯಲ್ಲೇ ರೌಡಿಶೀಟರ್ನೋರ್ವನನ್ನು ಹತ್ಯೆಮಾಡಿರುವ ಸುದ್ದಿಯಿಂದ ಶ್ರೀರಂಗಪಟ್ಟಣ ವ್ಯಾಪ್ತಿಯ ಜನತೆ ಬೆಚ್ಚಿಬಿದ್ದಿದ್ದಾರೆ.ಹಳೇ ದ್ವೇಷದ ಹಿನ್ನೆಲೆಯಲ್ಲಿಯ ಈ ಹತ್ಯೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬಲೆಬೀಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com