ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಪತ್ನಿ ಆತ್ಮಹತ್ಯೆಗೆ ಶರಣು!

ಕೆ.ಆರ್ ಪುರಂ ಕ್ಷೇತ್ರದ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ವಿನೋದಾ ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ವಿನೋದ-ಜಯಪ್ರಕಾಶ್
ವಿನೋದ-ಜಯಪ್ರಕಾಶ್

ಬೆಂಗಳೂರು: ಕೆ.ಆರ್. ಪುರಂ ಕ್ಷೇತ್ರದ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ವಿನೋದಾ ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಬೆಳಗ್ಗೆ 9 ಗಂಟೆ ಸುಮಾರಿಗೆ ಮನೆಯ ಕೋಣೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವಿನೋದಾ ಅವರು ಇತ್ತೀಚೆಗಷ್ಟೇ ಅಪೆಂಡಿಕ್ಸ್ ಆಪರೇಷನ್ ಮಾಡಿಸಿಕೊಂಡಿದ್ದರು. ಇನ್ನು ಪತ್ನಿಯ ಸಾವಿನ ಸುದ್ಧಿ ಕೇಳಿ ಜಯಪ್ರಕಾಶ್ ಸಹ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜಯಪ್ರಕಾಶ್ ಮತ್ತು ವಿನೋದಾ ದಂಪತಿಗೆ 3 ವರ್ಷದ ಮಗುವಿದೆ. ಸದ್ಯ ಕೆಆರ್ ಪುರಂ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರಿಗೆ ಜಯಪ್ರಕಾಶ್ ಅತ್ಯಾಪ್ತರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com