ಬೆಂಗಳೂರು: ವಿಶ್ವ ಬ್ಯಾಂಕ್ ಹಾಗೂ ಏಷ್ಯಾ ಮೂಲಸೌಕರ್ಯ ಹೂಡಿಕೆ ಬ್ಯಾಂಕ್ ನೆರವಿನಿಂದ ದೇಶದಲ್ಲಿ ಅಣೆಕಟ್ಟೆ ಪುನರ್ವಸತಿ ಮತ್ತು ಸುಧಾರಣೆ ಯೋಜನೆಯ 2 ಮತ್ತು 3ನೇ ಹಂತದ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವುದನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ಈ ಯೋಜನೆಯಿಂದ ರಾಜ್ಯಕ್ಕೆ ಅನುಕೂಲವಾಗಲಿದೆ. ರಾಜ್ಯದಲ್ಲಿ ಜಲ ಸಂಪನ್ಮೂಲ ಇಲಾಖೆಯಿಂದ ಡಿ.ಆರ್.ಐ.ಪಿ ನೀರಾವರಿ ಯೋಜನೆ ಜಾರಿಯಲ್ಲಿದ್ದು, ಕೇಂದ್ರದ ಈ ಕ್ರಮದಿಂದ ಅಣೆಕಟ್ಟೆಯ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
ಬರುವ 2021ರಿಂದ 2031ರ ಅವಧಿಯಲ್ಲಿ ಈ ಎರಡೂ ಹಂತಗಳ ಯೋಜನೆಗಳನ್ನು ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರ 10,211 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ. ಈ ಪೈಕಿ ಬ್ಯಾಂಕ್ ಗಳು 7 ಸಾವಿರ ಕೋಟಿ ರೂಪಾಯಿ ನೆರವು ನೀಡಲಿದ್ದು, ಅಣೆಕಟ್ಟೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿ, ಅಣೆಕಟ್ಟೆಗಳ ಕಾರ್ಯಾಚರಣೆಯನ್ನು ವೃದ್ಧಿಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದಿದ್ದಾರೆ.
Advertisement