ಕೋವಿಡ್-19 ನಿಯಮ ಉಲ್ಲಂಘನೆ: ಬೆಂಗಳೂರಿನ 7 ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ 

ಕೋವಿಡ್-19 ನಿಯಮ ಉಲ್ಲಂಘಿಸಿದ ಬೆಂಗಳೂರಿನ 7 ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್
ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್

ಬೆಂಗಳೂರು: ಕೋವಿಡ್-19 ನಿಯಮ ಉಲ್ಲಂಘಿಸಿದ ಬೆಂಗಳೂರಿನ 7 ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಸರ್ಕಾರದ ನಿಯಮಗಳಾನುಸಾರ ಖಾಸಗಿ ಆಸ್ಪತ್ರೆಗಳು ಸರ್ಕಾರಕ್ಕೆ ಶೇ.50ರಷ್ಟು ಬೆಡ್ ಗಳನ್ನು ನೀಡದ ಹಿನ್ನಲೆಯಲ್ಲಿ ನಗರದ 7 ಖಾಸಗಿ ಆಸ್ಪತ್ರೆಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿರುವ ಬಿಬಿಎಂಪಿ, ಆಸ್ಪತ್ರೆಗಳ ಓಪಿಡಿ ಕ್ಲೋಸ್ ಮಾಡಿ, ಒಳರೋಗಿಳನ್ನು ಶಿಫ್ಟ್ ಮಾಡುವ ಎಚ್ಚರಿಕೆಯನ್ನು ನೀಡಿದೆ.  ಅಂತೆಯೇ ನೋಟಿಸ್ ಪಡೆದಿರುವ ಆಸ್ಪತ್ರೆಗಳು ಮುಂದಿನ 24 ಗಂಟೆಯಲ್ಲಿ ನೋಟಿಸ್‍ಗೆ ಉತ್ತರಿಸಬೇಕಿದೆ. ನಿಯಮಗಳನ್ನು ಉಲ್ಲಂಘಿಸಿದರೆ ಲೈಸನ್ಸ್ ಯಾಕೆ ರದ್ದು ಮಾಡಬಾರದು ಎಂದು ಬಿಬಿಎಂಪಿ ಕೇಳಿದೆ.

ಮೂಲಗಳ ಪ್ರಕಾರ 'ಸರ್ಕಾರದ ನಿಯಮಗಳನ್ನು ಪಾಲಿಸದ ನಗರದ ರಂಗದೊರೈ ಮೆಮೊರಿಯಲ್ ಆಸ್ಪತ್ರೆ, ಸಂಜಿವಿನಿ ಆಸ್ಪತ್ರೆ, ಡಾ. ಜಿವಿಜಿ ಹೆಲ್ತ್ ಕೇರ್ ಪ್ರೈವೆಟ್ ಲಿ., ಶ್ರೀನಿವಾಸ್ ಆಸ್ಪತ್ರೆ, ಮೆಡ್ ಸ್ಟಾರ್ ಆಸ್ಪತ್ರೆ, ನಂದನ ಹೆಲ್ತ್ ಕೇರ್ ಸರ್ವಿಸ್ ಇಂಡಿಯಾ ಲಿಮಿಟೆಡ್ ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿದೆ.  ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ನೋಟಿಸ್ ಜಾರಿ ಮಾಡಿದ್ದು, ಶೇ.50 ರಷ್ಟು ಕೋವಿಡ್ ಬೆಡ್ ನೀಡದ ಹಿನ್ನೆಲೆಯಲ್ಲಿ ವಿವರಣೆ ನೀಡುವಂತೆ ಕೋರಿದ್ದಾರೆ.  ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ (ಕೆಪಿಎಂಇ) ಕಾಯ್ದೆ ಅನ್ವಯ ನೋಟಿಸ್ ನೀಡಲಾಗಿದೆ.

ಈ ಹಿಂದೆ ಸರ್ಕಾರ ಸೂಚನೆ ಪಾಲಿಸದ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ, ಕೆಂಗೇರಿಯ ಸಂತೋಷ್ ಆಸ್ಪತ್ರೆ, ವರ್ತೂರಿನ ಸಕ್ರಾ ಆಸ್ಪತ್ರೆ ಹಾಗೂ ಓಲ್ಡ್ ಏರ್‍ಪೋರ್ಟ್ ರಸ್ತೆಯಲ್ಲಿನ ಶುಶ್ರೂಷಾ ಆಸ್ಪತ್ರೆ ಮೇಲೆ ಎಫ್‍ಐಆರ್ ದಾಖಲಾಗಿತ್ತು. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ನೀಡಿದ  ದೂರಿನ ಹಿನ್ನೆಲೆಯಲ್ಲಿ ಮೂರು ಆಸ್ಪತ್ರೆಗಳ ಮೇಲೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ (ಕೆಪಿಎಂಇ) ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್ ದಾಖಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com