ಭೀಮಾನದಿಯಲ್ಲಿ ಮುಳುಗಿ ನಾಲ್ವರು ಯುವಕರು ನೀರುಪಾಲು

ಭೀಮಾನದಿಯಲ್ಲಿ ಈಜಲು ತೆರಳಿದ್ದ ಐವರ ಪೈಕಿ ನಾಲ್ವರು ಜಲಸಮಾಧಿಯಾಗಿದ್ದು ಅದೃಷ್ಟವಶಾತ್ ಓರ್ವ ಬದುಕುಳಿದಿದ್ದಾನೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಯಾದಗಿರಿ: ಭೀಮಾನದಿಯಲ್ಲಿ ಈಜಲು ತೆರಳಿದ್ದ ಐವರ ಪೈಕಿ ನಾಲ್ವರು ಜಲಸಮಾಧಿಯಾಗಿದ್ದು ಅದೃಷ್ಟವಶಾತ್ ಓರ್ವ ಬದುಕುಳಿದಿದ್ದಾನೆ. 

ಯಾದಗಿರಿ ನಗರದ ಅಜೀಜ್ ಕಾಲೋನಿಯ ಯುವಕರಾದ 16 ವರ್ಷದ ಅಮನ್, ಅಯಾನ್(16), ಇರ್ಫಾನ್(17) ರಿಯಾನ್(16) ಮೃತ ದುರ್ದೈವಿಗಳು.

ಮೃತದೇಹಗಳಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಸುತ್ತಿದೆ. ಸ್ಥಳಕ್ಕೆ ಯಾದಗಿರಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com