ಕರಾವಳಿ ರಕ್ಷಣಾ ಪಡೆಯಿಂದ ಸಮುದ್ರದಲ್ಲಿ ಸಿಲುಕಿದ್ದ 24 ಮೀನುಗಾರರ ರಕ್ಷಣೆ

ಭಟ್ಕಳ ಬಂದರು ಸಮೀಪ ಸಮುದ್ರದಲ್ಲಿ ಸಿಲುಕಿದ್ದ 24 ಮೀನುಗಾರರನ್ನು ಕರ್ನಾಟಕ ಕರಾವಳಿ ರಕ್ಷಣಾ ಪಡೆ ಶುಕ್ರವಾರ ರಕ್ಷಿಸಿದೆ.
ಮೀನುಗಾರರ ರಕ್ಷಣೆ
ಮೀನುಗಾರರ ರಕ್ಷಣೆ

ಮಂಗಳೂರು: ಭಟ್ಕಳ ಬಂದರು ಸಮೀಪ ಸಮುದ್ರದಲ್ಲಿ ಸಿಲುಕಿದ್ದ 24 ಮೀನುಗಾರರನ್ನು ಕರ್ನಾಟಕ ಕರಾವಳಿ ರಕ್ಷಣಾ ಪಡೆ ಶುಕ್ರವಾರ ರಕ್ಷಿಸಿದೆ.

ಕರ್ನಾಟಕ ಕರಾವಳಿಯಲ್ಲಿ ಕಾರ್ಯಾಚರಣೆಗೆ ನಿಯೋಜನೆಗೊಂಡಿರುವ ಭಾರತೀಯ ಕರಾವಳಿ ರಕ್ಷಣಾ ಪಡೆ(ಐಸಿಜಿ)ಯ ‘ಕಸ್ತೂರ್‍ ಬಾ ಗಾಂಧಿ’ ಹಡಗನ್ನು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿತ್ತು. ಈ ಹಡಗು ಕಳೆದ ರಾತ್ರಿ ಡೇಟಮ್‌ಗೆ ಆಗಮಿಸಿ ಮೀನುಗಾರರೊಂದಿಗೆ ಸಂವಹನ ಸ್ಥಾಪಿಸುವಲ್ಲಿ ಯಶಸ್ವಿಯಾಗಿತ್ತು. ಎಂಜಿನ್ ವೈಫಲ್ಯದಿಂದಾಗಿ ಮೀನುಗಾರಿಕಾ ದೋಣಿ ಅಪಾಯಕ್ಕೆ ಸಿಲುಕಿತ್ತು.

ಮೀನುಗಾರಿಕೆ ಉಪನಿರ್ದೇಶಕರ ಮನವಿಯಂತೆ ಸಮುದ್ರದಲ್ಲಿ ರಕ್ಷಣಾ ಕಾರ್ಯಾಚರಣೆ ಇಂದು ಬೆಳಿಗ್ಗೆ ಪೂರ್ಣಗೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com