ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಮೊಮ್ಮಗ ಕಾಫಿ ಡೇ ಉದ್ಯಮಿ ದಿ.ಸಿದ್ದಾರ್ಥ್ ಪುತ್ರ ಅಮರ್ತ್ಯ ಹೆಗಡೆ ವಿವಾಹವನ್ನು ಮುಂಬರುವ ಫೆಬ್ರವರಿ ತಿಂಗಳಿನಲ್ಲಿ ನಡೆಸಲು ಎರಡು ಕುಟುಂಬಗಳು ತೀರ್ಮಾನಿಸಿವೆ ಎನ್ನಲಾಗಿದೆ.
ಫೆ.24 ರಂದು ಮದುವೆ ಮಾಡಲು ಎರಡು ಕುಟುಂಬಗಳು ತೀರ್ಮಾನಿಸಿವೆ.ಆದರೆ ಐಶ್ವರ್ಯ ಮತ್ತು ಅಮರ್ತ್ಯ ಪ್ರೇಮಿಗಳ ದಿನದಂದು ಅಂದರೆ ಫೆ.14 ರಂದು ಮದುವೆಯಾಗುವ ಬಗ್ಗೆ ಒಲವು ತೋರಿದ್ದಾರೆ ಎನ್ನಲಾಗಿದೆ.
ಕಳೆದ ಏಪ್ರಿಲ್ 15 ರಂದು ಕೋವಿಡ್ ನಿಂದಾಗಿ ಐಶ್ವರ್ಯಾ ಮತ್ತು ಅಮರ್ತ್ಯ ನಿಶ್ಚಿತಾರ್ಥ ನಡೆದಿತ್ತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿವಾಹ ನಡೆಸಲು ಎರಡು ಕುಟುಂಬಗಳು ನಿರ್ಧರಿಸಿದ್ದವು.
Advertisement