ನಾಲ್ವರು ಎಂಜಿನಿಯರ್'ಗಳ ನೇಮಕ ಆದೇಶ ಮರುಪರಿಶೀಲಿಸಿ: ನಗರಾಭಿವೃದ್ಧಿ ಇಲಾಖೆಗೆ ಬಿಬಿಎಂಪಿ ಆಯುಕ್ತ ಪತ್ರ

ನಾಲ್ವರು ಎಂಜಿನಿಯರ್ ಗಳನ್ನು ಮತ್ತೆ ಬಿಬಿಎಂಪಿಗೆ ನೇಮಿಸಿರುವ ಆದೇಶದ ಕುರಿತು ಸ್ಪಷ್ಟನೆಗಳನ್ನು ನೀಡಿ ಎಂದು ಸರ್ಕಾರಕ್ಕೆ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಅವರು ಪತ್ರ ಬರೆದಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಾಲ್ವರು ಎಂಜಿನಿಯರ್ ಗಳನ್ನು ಮತ್ತೆ ಬಿಬಿಎಂಪಿಗೆ ನೇಮಿಸಿರುವ ಆದೇಶದ ಕುರಿತು ಸ್ಪಷ್ಟನೆಗಳನ್ನು ನೀಡಿ ಎಂದು ಸರ್ಕಾರಕ್ಕೆ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಅವರು ಪತ್ರ ಬರೆದಿದ್ದಾರೆ. 

ಈ ಕುರಿತು ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದಿರುವ ಅವರು, ಮಲ್ಲೇಶ್ವರ, ಗಾಂಧಿನಗರ, ರಾಜರಾಜೇಶ್ವರಿ ನಗರ ವಿಭಾಗದ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದಲ್ಲಿ ಭಾಗಿಯಾಗಿದ್ದಾರೆಂದು ನ್ಯಾಯಮೂರ್ತಿ ನಾಗಮೋಹನ್ ದಾರ್ ವರದಿಯಲ್ಲಿ ಉಲ್ಲೇಖಿಸಿದ ನಾಲ್ವರು ಎಂಜಿನಿಯರ್ ಗಳನ್ನು ಈ ಹಿಂದೆ ವಜಾಗೊಳಿಸಲಾಗಿತ್ತು. ಇದೀಗ ಮತ್ತೆ ನಾಲ್ವರು ಎಂಜಿನಿಯರ್ ಗಳನ್ನು ನೇಮಿಸಲಾಗಿದ್ದು. ಈ ಆದೇಶವನ್ನು ಮರುಪರಿಶೀಲಿಸುವಂತೆ ತಿಳಿಸಿದ್ದಾರೆಂದು ತಿಳಿದುಬಂದಿದೆ. 

ಅಕ್ರಮದಲ್ಲಿ ಭಾಗಿಯಾಗಿ ತಪ್ಪಿತಸ್ಥರು ಎಂದು ಗುರುತಿಸಲ್ಪಟ್ಟ ಎಂಜಿನಿಯರ್ ಗಳಾದ ಡಿ.ಹರೀಶ್ ಕುಮಾರ್, ವಿ.ಮೋಹನ್, ಜಿ.ಆರ್.ಕುಮಾರ್, ಎನ್.ಎಸ್.ರೇವಣ್ಣ ಅವರನ್ನು ಈಗಾಗಲೇ ಬಿಬಿಎಂಪಿ ಸೇವೆಯಿಂದ ಬಿಡುಗಡೆ ನೀಡಲಾಗಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com