ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ಗೆ ಕೊರೊನಾ ಸೋಂಕು

ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಪ್ರಮೋದ್ ಮುತಾಲಿಕ್
ಪ್ರಮೋದ್ ಮುತಾಲಿಕ್

ಬೆಂಗಳೂರು: ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಜ್ಯದ ಹಲವೆಡೆ ಪ್ರವಾಸ ಕೈಗೊಂಡಿರುವ ಸಮಯದಲ್ಲಿ ಅವರು ಜ್ಚರದಿಂದ ಬಳಲುತ್ತಿದ್ದರು. ಹೀಗಾಗಿ ಕೋವಿಡ್ ಪರೀಕ್ಷೆಗೆ ಒಳಗಾದಾಗ ಸೋಂಕು ತಗುಲಿರುವುದು ಪತ್ತೆಯಾಗಿದೆ. 

ಬೆಂಗಳೂರಿನ ಯಲಹಂಕದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಪ್ರಮೋದ್ ಮುತಾಲಿಕ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇತ್ತೀಚೆಗೆ ಮೈಸೂರು ಸಂಸದ ಪ್ರತಾಪ ಸಿಂಹ ಸೇರಿದಂತೆ ಹಲವರನ್ನು ಭೇಟಿಯಾಗಿದ್ದರು. ರಾಜ್ಯದಲ್ಲಿನ ಆಗುಹೋಗುಗಳ ಬಗ್ಗೆ ಸಮಾಲೋಚನೆ ನಡೆಸಿದ್ದರು.

ಸತತ ಪ್ರಯಾಣದಿಂದ ಜ್ವರ ಬಂದಿದೆ ಎನ್ನಲಾಗಿತ್ತು. ಆದರೂ ಮುಂಜಾಗ್ರತಾ ಕ್ರಮವಾಗಿ ತಪಾಸಣೆಗೆ ಒಳಗಾದಾಗ ಸೋಂಕಿರುವುದು ಪತ್ತೆಯಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com