ಗಾಯಗೊಂಡಿದ್ದ ಮರಿಯಾನೆ ಮೇಲೆ ದಾಳಿ ಮಾಡಿ ಕೊಂದ ಹುಲಿ; ಬಂಡೀಪುರ ಅರಣ್ಯದಲ್ಲಿ ಘಟನೆ

ಗಾಯಗೊಂಡಿದ್ದ ಮರಿಯಾನೆಯನ್ನು ಹುಲಿಯೊಂದು ಬೇಟೆಯಾಡಿ ತಿಂದಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಾಮರಾಜನಗರ: ಗಾಯಗೊಂಡಿದ್ದ ಮರಿಯಾನೆಯನ್ನು ಹುಲಿಯೊಂದು ಬೇಟೆಯಾಡಿ ತಿಂದಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.

ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಲೊಕ್ಕೆರೆಯಲ್ಲಿ ಈ ನಡೆದಿದ್ದು, ಗಾಯಗೊಂಡಿದ್ದ ಮರಿಯಾನೆಯನ್ನು ಬೇಟೆಯಾಡಿದ ಹುಲಿ ಅದನ್ನು ತಿಂದಿದೆ. ಮೃತಪಟ್ಟ ಗಂಡು ಮರಿಯಾನೆ ಸುಮಾರು 5 ರಿಂದ 6 ವರ್ಷದಾಗಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ತಾಯಿ ಆನೆಯಿಂದ ಬೇರ್ಪಟ್ಟ ಬಳಿಕ ಈ ಆನೆ ಗಾಯಗೊಂಡಿತ್ತು. ನಂತರ ಈ ಆನೆಯನ್ನು ಹುಲಿ ಬೇಟೆಯಾಡಿದೆ ಎಂದು ಸಿಎಫ್ಒ ಬಾಲಚಂದ್ರ ತಿಳಿಸಿದ್ದಾರೆ. 

ಗಸ್ತಿನಲ್ಲಿದ್ದ ಸಿಬ್ಬಂದಿಗೆ ಆನೆ ಕಳೆಬರ ಕಾಣಿಸಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದ್ದು, ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಶನಿವಾರವಾದ ಇಂದು ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ವರದಿ: ಗುಳಿಪುರ ನಂದೀಶ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com