ಬೆಂಗಳೂರು: ಚಂದನವನಕ್ಕೆ ಮಾದಕ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಮಾದಕ ಜಾಲದ ನಂಟು ಆರೋಪದಡಿ ಈಗಾಗಲೇ ವಿಚಾರಣೆ ಎದುರಿಸಿದ್ದ ಆರೋಪಿ ಕಾರ್ತಿಕ್ ರಾಜುನನ್ನು ಸಿಸಿಬಿ ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ. ಸದ್ಯ ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ ಕಾರ್ತಿಕ್ ವಿಚಾರಣೆ ನಡೆಸಲಾಗುತ್ತಿದೆ.
ಕಾರ್ತಿಕ್, ಪ್ರತಿಷ್ಠಿತ ರೆಸಾರ್ಟ್ ವೊಂದರ ಮಾಲೀಕರಾಗಿದ್ದಾರೆ. ಇವರ ರೆಸಾರ್ಟ್ನಲ್ಲಿ ಡ್ರಗ್ಸ್ ಪಾರ್ಟಿಗಳು ನಡೆಯುತ್ತಿದ್ದವು ಎನ್ನಲಾಗಿದೆ. ಬಂಧಿತ ಆರೋಪಿ ಕಾರ್ತಿಕ್ ಅವರ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿ ಮಾಡಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟ ಹಿನ್ನೆಲೆಯಲ್ಲಿ ಕಾರ್ತಿಕ್ ರನ್ನು ಮತ್ತೊಮ್ಮೆ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜೈಲಿನಲ್ಲಿದ್ದಾರೆ. ವಿಚಾರಣೆ ವೇಳೆ ಕಾರ್ತಿಕ್ ರಾಜು ಅವರು ಯಾವೆಲ್ಲ ಅಂಶಗಳನ್ನು ಬಾಯ್ಬಿಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
Advertisement