ಉಡುಪಿ: ಹಾಡುಹಗಲೇ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರ ಕೊಲೆ

ಹಾಡುಹಗಲೇ ರಿಯಲ್ ಎಸ್ಟೇಟ್ ಉದ್ಯಮಿಯನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. 
ಕಿಶನ್
ಕಿಶನ್

ಉಡುಪಿ: ಹಾಡುಹಗಲೇ ರಿಯಲ್ ಎಸ್ಟೇಟ್ ಉದ್ಯಮಿಯನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. 

ಉಡುಪಿಯ ಹಿರಿಯಡ್ಕ ಸಿಂಡಿಕೇಟ್ ಬ್ಯಾಂಕ್ ಮುಂಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ಕಾಪು ತಾಲೂಕಿನ ಇನ್ನ ಗ್ರಾಮದ ಕಿಶನ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಕಿಶನ್ ತನ್ನ ಸ್ನೇಹಿತನ ಜೊತೆ ಕಾರಿನಲ್ಲಿ ತೆರಳುತ್ತಿದ್ದಾಗ ಉಡುಪಿ ಕಡೆಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಕಿಶನ್ ಕಾರಿನಿಂದ ಇಳಿಯುತ್ತಿದ್ದಂತೆ ದಾಳಿ ನಡೆಸಿದ್ದಾರೆ. ತಲೆ ಮತ್ತು ಕುತ್ತಿಗೆಗೆ ಬಲವಾದ ಗಾಯವಾಗಿದ್ದರಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ಕಿಶನ್ ಒಡ್ಡಾಡಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. 

ಕಿಶನ್ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದು ಅಪರಾಧ ಚಟುವಟಿಕೆಗಳಲ್ಲೂ ಕೂಡ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com