ಕಲಬುರಗಿ ಬಿಜೆಪಿ ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು

ಕಲಬುರಗಿ ಸಂಸದರಾದ ಡಾ. ಉಮೇಶ್ ಜಾಧವ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರು ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಂಸದ ಉಮೇಶ್ ಜಾಧವ್
ಸಂಸದ ಉಮೇಶ್ ಜಾಧವ್

ಬೆಂಗಳೂರು: ಕಲಬುರಗಿ ಸಂಸದರಾದ ಡಾ. ಉಮೇಶ್ ಜಾಧವ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರು ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಂಸದರಿಗೆ ಸಣ್ಣದಾಗಿ ಎದಿನೋವು ಕಾಣಿಸಿಕೊಂಡ ಕಾರಣ ಕೂಡಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ಹೇಳಿದೆ.

ಇನ್ನು ಈ ಸಂಬಂಧ ಸಂಸದ ಜಾಧವ್ ಸ್ವತಃ ಟ್ವೀಟ್ ಮಾಡಿದ್ದು "ಇಂದು ಬೆಳಿಗ್ಗೆ ಎದೆನೋವಿನಿಂದಾಗಿ, ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದೇನೆ. ಆ ವೇಳೆ ಅಲ್ಲಿನ ಆಸ್ಪತ್ರೆ ಮುಖ್ಯಸ್ಥರಾದ  ಡಾ.ಮಂಜುನಾಥ್ ಸಿಎನ್ ಅವರ ಸಲಹೆಯಂತೆ ಕೆಲ ಪರೀಕ್ಷೆಗಳನ್ನು ಮಾಡಿಸಿಕೊಳ್ಳುತ್ತಿದ್ದೇನೆ.  ಅಲ್ಲದೆ ಹೆಚ್ಚಿನ ತಪಾಸಣೆಗಾಗಿ ಆಸ್ಪತ್ರೆಯಲ್ಲಿ ದಾಖಲಾಗಲು ನನಗೆ ಸೂಚಿಸಲಾಗಿದೆ. 

"ಆರೋಗ್ಯದ ಬಗ್ಗೆ ಚಿಂತಿಸಬೇಕಿಲ್ಲ, , ನಾನು ಶೀಘ್ರದಲ್ಲೇ ಗುಣಮುಖವಾಗಿ ಹಿಂತಿರುಗುತ್ತೇನೆ." ಎಂದಿದ್ದಾರೆ.

ಸಂಸದರು ಇತ್ತೀಚೆಗೆ ಕೊರೋನಾ ಪರೀಕ್ಷೆಯನ್ನೂ ಮಾಡಿಸಿಕೊಂಡಿದ್ದು ಆ ವರದಿ "ನೆಗೆಟಿವ್" ಬಂದಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com