ಬೆಳಗಾವಿ: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಣಿ ಚೆನ್ನಮ್ಮ ವಿಶ್ವ ವಿದ್ಯಾನಿಲಯ ಯುಜಿ ಪರೀಕ್ಷೆಗಳನ್ನು ಮುಂದೂಡಿದೆ.
ಇಂದಿನಿಂದ ಯುಜಿ ಪರೀಕ್ಷೆಗಳು ಆರಂಭವಾಗಬೇಕಿತ್ತು, ಆದರೆ ಕೃಷಿ ಮಸೂದೆ ವಿರೋಧಿಸಿ ರೈತರು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ.
ಸೋಮವಾರದಿಂದ ನಿಗದಿ ಪಡಿಸಿದ್ದ ಪರೀಕ್ಷೆಗಳು ಮಂಗಳವಾರದಿಂದ ಆರಂಭವಾಗಲಿವೆ ಎಂದು ವಿವಿ ರಿಜಿಸ್ಟ್ರಾರ್ ಎಸ್ ಎಂ ಹುರಕಡ್ಲಿ ತಿಳಿಸಿದ್ದಾರೆ.
Advertisement