'ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ, ತಕ್ಷಣವೇ ಅವರನ್ನು ಕಿತ್ತು ಹಾಕಿ': ಸಿದ್ದರಾಮಯ್ಯ
ಎರಡು ವಾರಗಳ ಹಿಂದೆಯಷ್ಟೇ ಅತ್ಯಾಚಾರಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಉತ್ತರ ಪ್ರದೇಶದ ಯುವತಿಯ ಅಂತ್ಯ ಸಂಸ್ಕಾರವನ್ನು ಉತ್ತರ ಪ್ರದೇಶದ ಪೊಲೀಸರು ಒತ್ತಾಯಪೂರ್ವಕವಾಗಿ ಮಾಡಿರುವುದನ್ನು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ.
Published: 30th September 2020 01:35 PM | Last Updated: 30th September 2020 01:35 PM | A+A A-

ಯೋಗಿ ಆದಿತ್ಯನಾಥ್
ಬೆಂಗಳೂರು: ಎರಡು ವಾರಗಳ ಹಿಂದೆಯಷ್ಟೇ ಅತ್ಯಾಚಾರಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಉತ್ತರ ಪ್ರದೇಶದ ಯುವತಿಯ ಅಂತ್ಯ ಸಂಸ್ಕಾರವನ್ನು ಉತ್ತರ ಪ್ರದೇಶದ ಪೊಲೀಸರು ಒತ್ತಾಯಪೂರ್ವಕವಾಗಿ ಮಾಡಿರುವುದನ್ನು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ.
ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ, ಹೆತ್ತವರನ್ನು ಗೋಳಾಡಿಸಿದ ಯೋಗಿ ಆದಿತ್ಯನಾಥ ಅವರು ಕಾವಿಧಾರಿಗಳ ಪಾಲಿನ ಕಳಂಕ. ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ. ಮೊದಲು ಇವರನ್ನು ವಜಾ ಮಾಡಿ ಎಂದು ಒತ್ತಾಯಿಸಿದ್ದಾರೆ.
ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ,
— Siddaramaiah (@siddaramaiah) September 30, 2020
ಹೆತ್ತವರನ್ನು ಗೋಳಾಡಿಸಿದ @myogiadityanath ಕಾವಿಧಾರಿಗಳ ಪಾಲಿನ ಕಳಂಕ.
ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ.
ಮೊದಲು ಇವರನ್ನು ವಜಾ ಮಾಡಿ.#HathrasHorror