ಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತೆ ನೇಣಿಗೆ ಶರಣು!

ವರ್ಷದಿಂದ ಕೆಲಸವಿಲ್ಲದೆ ಖಿನ್ನತೆಗೆ ಒಳಗಾಗಿದ್ದ ಏಕಲವ್ಯ ಪ್ರಶಸ್ತಿ ಪುರಸ್ಕೃತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಜಯನಗರದ ಮಾರೇನಹಳ್ಳಿಯಲ್ಲಿ ನಡೆದಿದೆ.
ಶಿಲ್ಪಾ ಜಿ.ಬಿ.
ಶಿಲ್ಪಾ ಜಿ.ಬಿ.
Updated on

ಬೆಂಗಳೂರು: ವರ್ಷದಿಂದ ಕೆಲಸವಿಲ್ಲದೆ ಖಿನ್ನತೆಗೆ ಒಳಗಾಗಿದ್ದ ಏಕಲವ್ಯ ಪ್ರಶಸ್ತಿ ಪುರಸ್ಕೃತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಜಯನಗರದ ಮಾರೇನಹಳ್ಳಿಯಲ್ಲಿ ನಡೆದಿದೆ.

ಮಹಿಳಾ ಈಜುಗಾರ್ತಿಯಾಗಿದ್ದ ಜಿ.ಬಿ. ಶಿಲ್ಪಾ (41)  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಶಿಕ್ಷಣ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದರೂ ಕೆಲಸ ಪಡೆಯಲಾಗದೆ ಹೋದ ಬಗ್ಗೆ ಡೆತ್ ನೋಟ್ ನಲ್ಲಿ ನೋವು ತೋಡಿಕೊಂಡಿರುವ ಶಿಲ್ಪಾ ಪತಿ ಮನೆಯಲ್ಲಿಲ್ಲದ ವೇಳೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ರೀಡಾ ಶಾಲೆಯೊಂದರಲ್ಲಿ ಕೆಲ ವರ್ಷಗಳಿಂದ ಕೋ್ಚ್ ಅಗಿ ಕೆಲಸ ಮಾಡುತ್ತಿದ್ದ ಈಕೆ ಕಳೆದ ವರ್ಷ ಲಾಕ್ ಡೌನ್ ನಂತರದಲ್ಲಿ ಕೆಲಸ ಕಳೆದುಕೊಂಡಿದ್ದರು.

ಘಟನೆ ಸಂಬಂಧ ಜಯನಗರ ಪೋಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com