ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ

ಇನ್ಮುಂದೆ ಸಚಿವಾಲಯದ ಸಿಬ್ಬಂದಿಗೆ ಕಠಿಣ ನಿಯಮ ಜಾರಿ: ಸಭಾಪತಿ ಬಸವರಾಜ ಹೊರಟ್ಟಿ

ಸಚಿವಾಲಯದ ಸಿಬ್ಬಂದಿಗೆ ಕಠಿಣ ನಿಯಮ ಜಾರಿಮಾಡಲು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಂದಾಗಿದ್ದಾರೆ.
Published on

ಬೆಂಗಳೂರು: ಸಚಿವಾಲಯದ ಸಿಬ್ಬಂದಿಗೆ ಕಠಿಣ ನಿಯಮ ಜಾರಿಮಾಡಲು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಂದಾಗಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೊರಟ್ಟಿ, ಸಚಿವಾಲಯದ ಸಿಬ್ಬಂದಿಗೆ ಬಯೋಮೆಟ್ರಿಕ್ ಕಡ್ಡಾಯ ಮಾಡಿದ್ದು, ಸ್ಯಾನಿಟೈಸ್ ಮಾಡಿ ಬಯೋಮೆಟ್ರಿಕ್ ಉಪಯೋಗಿಸಬೇಕು. ಕೊರೋನಾ ನೆಪವೊಡ್ಡಿ ಬಯೋಮೆಟ್ರಿಕ್ ತೆಗೆಯುವಂತಿಲ್ಲ. ತೆಗೆದರೆ ಸಿಬ್ಬಂದಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸುವುದಿಲ್ಲ. ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಬರುವುದಿಲ್ಲ. ಹೀಗಾಗಿ ಬಯೋಮೆಟ್ರಿಕ್ ಕಡ್ಡಾಯ ಮಾಡಿದ್ದೇವೆ. ಸರಿಯಾದ ಸಮಯಕ್ಕೆ ಬರದವರಿಗೆ ಕ್ರಮತೆಗೆದುಕೊಳ್ಳುವುದಾಗಿ ಎಚ್ಚರಿಸಿದರು.

ಡಿ ಗ್ರೂಪ್ ನೌಕರರಿಗೆ ಸಮವಸ್ತ್ರ ವಿಚಾರವಾಗಿ ಪ್ರತಿಕ್ರಿಯಿಸಿದ ಸಭಾಪತಿ ಬಸವರಾಜ ಹೊರಟ್ಟಿ, ನೌಕರರು ಹೇಳಿದಂತೆ ಕುಣಿಯಲು ಸಾಧ್ಯವಿಲ್ಲ. ನಾವು ಜಾರಿ ಮಾಡಿದ ನಿಯಮವನ್ನು ಪಾಲಿಸಬೇಕಷ್ಟೆ ಎಂದರು.

ಸಮವಸ್ತ್ರ ಇದ್ದರೆ ಕರ್ತವ್ಯದಲ್ಲಿ ಶಿಸ್ತು ಹೆಚ್ಚಾಗಲಿದೆ. ಬಿಳಿ ಬಣ್ಣ ಬೇಡವೆಂದು ಮನವಿ‌ಮಾಡಿದ್ದ ನೌಕರರ ಬೇಡಿಕೆಯನ್ನು ಪರಿಗಣಿಸಲಾಗದು. ಬಣ್ಣ ಬದಲಾಯಿಸಲು ಸಾಧ್ಯವಿಲ್ಲ. ಈಗಾಗಲೇ ಯೂನಿಫಾರಂ ಬಗ್ಗೆ ಹೇಳಿದ್ದೇವೆ. ಸರ್ಕಾರಿ ಮಳಿಗೆಯಿಂದಲೇ ಸಮವಸ್ತ್ರ ಖರೀದಿಸಲಾಗುವುದು. ಮಹಿಳೆಯರಿಗೆ ಸೀರೆಗೆ ಬದಲು ಚೂಡಿದಾರ್ ಹಾಕಿಕೊಳ್ಳಲು ಅವಕಾಶ ನೀಡಲಾಗಿದೆ‌ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com