ಬೆಂಗಳೂರಿಗೆ ಲಾಕ್‌ಡೌನ್ ಅಗತ್ಯವಿಲ್ಲ: ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರಿಗೆ ಲಾಕ್ ಡೌನ್ ಅವಶ್ಯಕತೆ ಇಲ್ಲ. ಸರ್ಕಾರದ ಮುಂದೆಯೂ ಲಾಕ್ ಡೌನ್ ಪ್ರಸ್ತಾಪ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಆರ್.ಅಶೋಕ್
ಆರ್.ಅಶೋಕ್
Updated on

ಬೆಂಗಳೂರು: ಬೆಂಗಳೂರಿಗೆ ಲಾಕ್ ಡೌನ್ ಅವಶ್ಯಕತೆ ಇಲ್ಲ. ಸರ್ಕಾರದ ಮುಂದೆಯೂ ಲಾಕ್ ಡೌನ್ ಪ್ರಸ್ತಾಪ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಬೆಂಗಳೂರಿನ ಕೊರೊನಾ ಪರಸ್ಥಿತಿ ನಿರ್ವಹಣೆ ಕುರಿತು ರಾಜಧಾನಿಯ ಸಚಿವರು, ಶಾಸಕರು ಹಾಗೂ ಸಂಸದರೊಂದಿಗೆ ಸಭೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಗೃಹ ಮತ್ತು ಕಾನೂನು ಸಚಿವ ಬಸವರಾಜ್ ಬೊಮ್ಮಾಯಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹಾಗೂ ಬಿಬಿಎಂಪಿಯ ಅಧಿಕಾರಿಗಳೊಂದಿಗೆ ಭಾನುವಾರ ಪೂರ್ವಭಾವಿ ಸಭೆ ನಡೆಸಿದರು‌.

ಬಳಿಕ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ  ಲಾಕ್ ಡೌನ್ ನಿಂದ ಈಗಾಗಲೇ ತುಂಬಾ ಸಮಸ್ಯೆ ಆಗಿದೆ. ಲಾಕ್ ಡೌನ್ ಹೊರತು ಪಡಿಸಿ ಬಿಗಿ ಕ್ರಮ ಜಾರಿ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಸೋಮವಾರದ ಜನ ಪ್ರತಿನಿಧಿಗಳ ಸಭೆಯ ನಂತರ ಬೆಂಗಳೂರಿಗೆ ಪ್ರತ್ಯೇಕ ಕಠಿಣ ನಿಯಮ ಜಾರಿ ಮಾಡುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com