ಬೆಂಗಳೂರು: 2 ಪ್ರತ್ಯೇಕ ಪ್ರಕರಣದಲ್ಲಿ ರೌಡಿ ಶೀಟರ್ ಸೇರಿ ಇಬ್ಬರ ಬರ್ಬರ ಹತ್ಯೆ

ನಗರದಲ್ಲಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ರೌಡಿ ಶೀಟರ್ ಸೇರಿ ಇಬ್ಬರ ಬರ್ಬರ ಹತ್ಯೆ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ನಗರದಲ್ಲಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ರೌಡಿ ಶೀಟರ್ ಸೇರಿ ಇಬ್ಬರ ಬರ್ಬರ ಹತ್ಯೆ ನಡೆದಿದೆ. 

ಅಶೋಕನಗರ ಮತ್ತು ವಿದ್ಯಾರಣ್ಯಪುರ ಪೊಲೀಸ್ ಠಾಣಾ ನಿಯಂತ್ರಣದಲ್ಲಿ ಮಂಗಳವಾರ ರಾತ್ರಿ ಎರಡು ಹತ್ಯೆಗಳು ನಡೆದಿವೆ. 

ಹಳೆಯ ದ್ವೇಷದ ಹಿನ್ನೆಲೆಯಲ್ಲಿ 12 ದಿನಗಳ ಹಿಂದಷ್ಟೇ ಜೈಲಿನಿಂದ ಹೊರಬಂದಿದ್ದ ರೌಡಿ ಶೀಟರ್ ರವಿವರ್ಮ ಅಲಿಯಾಸ್ ಅಪ್ಪು (23) ಎಂಬಾತನನ್ನು ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ಹತ್ಯೆ ಮಾಡಲಾಗಿದೆ. 

ರೋಜ್ ಗಾರ್ಡನ್'ನ ಮುನೇಶ್ವರ ಸ್ವಾಮಿ ದೇವಾಲಯದ ಸಮೀಪ ರವಿ ಮೇಲೆ ಮಂಗಳವಾರ ರಾತ್ರಿ 10ರ ಸುಮಾರಿಗೆ ಏಳೆಂಟು ಜನರ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. 

ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ಮುನ್ನವೇ ರವಿ ಕೊನೆಯುಸಿರೆಳೆದಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಮತ್ತೊಂದು ಪ್ರಕರಣ ವಿದ್ಯಾರಣ್ಯಪುರದಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಪ್ರಕಾಶ್ (25) ಎಂಬುವವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. 

ಪ್ರಕಾಶ್ ಅವರು ತಿಂಡ್ಲುವಿನಲ್ಲಿ ಕಟ್ಟಣ ನಿರ್ಮಾಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕಾಶ್ ನೆಲೆಸಿದ್ದ ಶೆಡ್ ಬಳಿಯೇ ಹತ್ಯೆ ನಡೆದಿದೆ. ಅನಾಮಧೇಯ ವ್ಯಕ್ತಿಗಳು ಪ್ರಕಾಶ್ ಅವರಿಗೆ ಹಲವು ಬಾರಿ ಚಾಕುವಿನಿಂದ ಇರಿದು ಸ್ಥಳದಿಂದ ಕಾಲ್ಕಿತ್ತಿದ್ದಾರೆ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com