ಕೋವಿಡ್ ಉಲ್ಬಣ: ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ

ಕಾವೇರಿ ನದಿಯಲ್ಲಿ ಮೃತಪಟ್ಟವರ ಚಿತಾಭಸ್ಮ ಹಾಗೂ ಇನ್ನಿತರೆ ವಸ್ತುಗಳನ್ನು ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ ವಿಧಿಸಿದೆ.
ಕಾವೇರಿ ನದಿ
ಕಾವೇರಿ ನದಿ
Updated on

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಮೃತಪಟ್ಟವರ ಚಿತಾಭಸ್ಮ ಹಾಗೂ ಇನ್ನಿತರೆ ವಸ್ತುಗಳನ್ನು ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ ವಿಧಿಸಿದೆ.

ಕೋವಿಡ್‌ನಿಂದಾಗಿ ಸಾವುಗಳು ಹೆಚ್ಚಾಗುತ್ತಿದ್ದಂತೆ, ಶ್ರೀರಂಗಪಟ್ಟಣದ ಪ್ರಸಿದ್ಧ ಪಶ್ಚಿಮವಾಹಿನಿ ಮತ್ತಿತರೆಡೆಗಳಲ್ಲಿ ಮೃತರ ಚಿತಾಭಸ್ಮವನ್ನು ಬಿಡಲು ಭಾರೀ ಸಂಖ್ಯೆಯಲ್ಲಿ ಜನ ಸೇರುತ್ತಿರುವುದನ್ನು ಗಮನಿಸಿ ಈ ಆದೇಶ ನೀಡಲಾಗಿದೆ.

ಕೋವಿಡ್ 19 ರ ಹರಡುವಿಕೆಯ ಬಗ್ಗೆ ಸ್ಥಳೀಯರು ಭಯ ವ್ಯಕ್ತಪಡಿಸಿದ್ದರಿಂದ ರಾಜ್ಯ ಮತ್ತು ನೆರೆ ಜಿಲ್ಲೆ, ನೆರೆ ರಾಜ್ಯಗಳ ಜನ ಕಾವೇರಿಯಲ್ಲಿ ಚಿತಾಭಸ್ಮವನ್ನು ಬಿಡುವುದಕ್ಕೆ ತಾಲ್ಲೂಕು ಆಡಳಿತವು ನಿಷೇಧ ಹೇರಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ತಹಶೀಲ್ದಾರ್ ಎಂ ವಿ ರೂಪಾ ತಿಳಿಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com