ಮಂಗಳೂರು: ಕೋವಿಡ್-19 ನಿಯಮ ಉಲ್ಲಂಘಿಸಿದ ಕಾಲೇಜಿನ ವಿರುದ್ಧ ಪ್ರಕರಣ ದಾಖಲು

ಕೋವಿಡ್-19  ಸೋಂಕು ತಡೆಗೆ ರಾಜ್ಯಾದ್ಯಂತ ಏ.27 ರಿಂದ ಕರ್ಫ್ಯೂ ಜಾರಿಯಾಗಿದೆ. ಆದರೆ ಮಂಗಳೂರಿನ ವಲಚಿಲ್ ನಲ್ಲಿ ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ಕಾಲೇಜಿನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 
ಕಾಲೇಜಿನ ವಿರುದ್ಧ ಪ್ರಕರಣ ದಾಖಲು (ಸಾಂಕೇತಿಕ ಚಿತ್ರ)
ಕಾಲೇಜಿನ ವಿರುದ್ಧ ಪ್ರಕರಣ ದಾಖಲು (ಸಾಂಕೇತಿಕ ಚಿತ್ರ)
Updated on

ಮಂಗಳೂರು: ಕೋವಿಡ್-19  ಸೋಂಕು ತಡೆಗೆ ರಾಜ್ಯಾದ್ಯಂತ ಏ.27 ರಿಂದ ಕರ್ಫ್ಯೂ ಜಾರಿಯಾಗಿದೆ. ಆದರೆ ಮಂಗಳೂರಿನ ವಲಚಿಲ್ ನಲ್ಲಿ ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ಕಾಲೇಜಿನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ಎಪಿಡಮಿಕ್ ಡಿಸೀಸಸ್ ಕಾಯ್ದೆಯಡಿ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ರಾಜ್ಯಾದ್ಯಂತ ಹಲವು ನಿರ್ಬಂಧಗಳು ಜಾರಿಯಲ್ಲಿದೆ. ಆದರೆ ಈ ಕಾಲೇಜು ಮಾತ್ರ ಎಂದಿನಂತೆ ತರಗತಿಗಳು ಸೇರಿ ಕ್ಯಾಂಪಸ್ ಒಳಗೆ ಹಲವು ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುತ್ತಿತ್ತು. 

ಕೋವಿಡ್-19 2  ನೇ ಅಲೆಯಲ್ಲಿ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರೋಗಿಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವುದಕ್ಕೂ ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಏ.27 ರಿಂದ ಮೇ.12 ವರೆಗೆ ಕರ್ಫ್ಯೂ ವಿಧಿಸಲಾಗಿದೆ. ಏ.26 ರಂದು ಸಿಎಂ ಯಡಿಯೂರಪ್ಪ ಎರಡು ವಾರಗಳ ಕಾಲ ಕರ್ಫ್ಯೂ ಘೋಷಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com