ರಾಷ್ಟ್ರೀಯ ಶಿಕ್ಷಣ ನೀತಿ 2020: ಆಗಸ್ಟ್ 23ರಂದು ಪ್ರವೇಶ ವಿಧಾನ ಬಿಡುಗಡೆ

ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್) ಮೂಲಕ ಆಗಸ್ಟ್ 23 ರಂದು ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ತಿಳಿಸಿದ್ದಾರೆ.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ಬೆಂಗಳೂರು: ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್) ಮೂಲಕ ಆಗಸ್ಟ್ 23 ರಂದು ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ತಿಳಿಸಿದ್ದಾರೆ.

ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಜೊತೆ ರಾಷ್ಟ್ರೀಯ ಶಿಕ್ಷಣ ನೀತಿ-2020(ಎನ್ ಇಪಿ-2020)ರ ಪಠ್ಯಕ್ರಮದ ತಯಾರಿ ಬಗ್ಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಖಾಸಗಿ, ಅನುದಾನಿತ ಮತ್ತು ಸರ್ಕಾರಿ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾತಿ ವಿಧಾನವನ್ನು ಅನುಸರಿಸಲಾಗುವುದು. ಪ್ರಮುಖ ಮತ್ತು ಸಣ್ಣ ವಿಷಯಗಳು, ಪ್ರಮುಖ ಆಯ್ಕೆಗಳು, ಮುಕ್ತ ಆಯ್ಕೆಗಳು, ವೃತ್ತಿಪರ ತರಬೇತಿ, ಈ ವಿಧಾನಗಳಲ್ಲಿ ಎಲ್ಲಾ ಮಾಹಿತಿಯನ್ನು ಒದಗಿಸಲಾಗುವುದು ಎಂದು ಹೇಳಿದರು.

ಒಟ್ಟಾರೆಯಾಗಿ, ರಾಷ್ಟ್ರೀಯ ಶಿಕ್ಷಣ ನೀತಿ ತತ್ವಗಳ ಪ್ರಕಾರ ಪಠ್ಯಕ್ರಮವನ್ನು ತಯಾರಿಸಲು 32 ವಿಷಯವಾರು ಮತ್ತು ಬೋಧಕವರ್ಗದ ಸಮಿತಿಯನ್ನು ರಚಿಸಲಾಗಿದೆ. ಪ್ರಸಕ್ತ ವರ್ಷ, ಪಠ್ಯಕ್ರಮವನ್ನು ಮೊದಲ ವರ್ಷದ ಪದವಿ ಕೋರ್ಸ್‌ಗಳಿಗೆ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ಮೊದಲ ವರ್ಷಕ್ಕೆ ತರಗತಿಗಳನ್ನು ಅಕ್ಟೋಬರ್ ಮೊದಲ ವಾರದಲ್ಲಿ ಆರಂಭಿಸಬೇಕು. ಎನ್ ಇಪಿಯನ್ನು ಕರ್ನಾಟಕದಲ್ಲಿ 10 ವರ್ಷದೊಳಗೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯು, ಕಠಿಣತೆಯನ್ನು ತೊಡೆದುಹಾಕುವ ಮೂಲಕ ಬೋಧನೆ-ಕಲಿಕೆಯ ಪ್ರಕ್ರಿಯೆಯಲ್ಲಿ ನಮ್ಯತೆಯನ್ನು ತರುತ್ತದೆ ಮತ್ತು ವಿದ್ಯಾರ್ಥಿಗಳು ತಮ್ಮ ಆಸಕ್ತಿಗಳ ಆಧಾರದ ಮೇಲೆ ತಮ್ಮದೇ ಕೋರ್ಸ್‌ಗಳನ್ನು ವಿನ್ಯಾಸಗೊಳಿಸಲು ಅನುವು ಮಾಡಿಕೊಡುತ್ತದೆ. ಇದರ ಬಳಕೆಯೊಂದಿಗೆ ಸಂಯೋಜಿತ ಕಲಿಕೆಗೆ ಇದು ಅವಕಾಶ ನೀಡುತ್ತದೆ ಎಂದು ಹೇಳಿದರು.

ಪ್ರಾದೇಶಿಕ ಭಾಷೆಗೆ ಒತ್ತು: ಪದವಿ ಕೋರ್ಸ್‌ಗಳಲ್ಲಿ ಭಾಷೆಯನ್ನು ಕಲಿಯುವುದು ಕಡ್ಡಾಯವಾಗಿರಲಿಲ್ಲ. ಆದರೆ, ನೂತನ ನೀತಿಯ ಪ್ರಕಾರ ಕನ್ನಡ ಕಡ್ಡಾಯವಾಗಿದೆ. ಪದವಿ ಕೋರ್ಸ್‌ನ ಮೊದಲ ಎರಡು ವರ್ಷಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಭಾಷೆಯನ್ನು ಕಲಿಯಬೇಕು. ಕರ್ನಾಟಕ ಸೇರಿದಂತೆ ರಾಜ್ಯಗಳ ಪ್ರಾದೇಶಿಕ ಭಾಷೆಗೆ ಆದ್ಯತೆ ನೀಡಲಾಗುತ್ತದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ವಿವರಿಸಿದ್ದಾರೆ.

ಈ ಮಧ್ಯೆ ಎಬಿವಿಪಿ, ರಾಷ್ಟ್ರೀಯ ಶೈಕ್ಷಣಿಕ ನೀತಿಯ ಸಂಪೂರ್ಣ ಅನುಷ್ಠಾನಕ್ಕೆ ಒತ್ತಾಯಿಸಿದೆ. ಸಾಂಕ್ರಾಮಿಕ ರೋಗದಿಂದಾಗಿ ಹಣಕಾಸಿನ ತೊಂದರೆಗಳನ್ನು ಪರಿಗಣಿಸಿ ಸಂಸ್ಥೆಯು ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ಕೋರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com