ಪ್ಯಾರಿಸ್ ಒಲಂಪಿಕ್ಸ್​'ಗೆ ರಾಜ್ಯದ ಕ್ರೀಡಾಪಟುಗಳ ಕಳುಹಿಸಲು ರಾಜ್ಯ ಸರ್ಕಾರ ಚಿಂತನೆ

ಪ್ಯಾರಿಸ್ ನಲ್ಲಿ 2024ಕ್ಕೆ ನಡೆಯುವ ಒಲಂಪಿಕ್ಸ್​ಗೆ ಕರ್ನಾಟಕದಿಂದ ಕನಿಷ್ಠ 100 ಮಂದಿ ಜನ ಕ್ರೀಡಾಪಟುಗಳನ್ನು ಕಳುಹಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. 
ಕ್ರೀಡಾ ಸಚಿವ ನಾರಾಯಣ್ ಗೌಡ
ಕ್ರೀಡಾ ಸಚಿವ ನಾರಾಯಣ್ ಗೌಡ
Updated on

ಬೆಂಗಳೂರು: ಪ್ಯಾರಿಸ್ ನಲ್ಲಿ 2024ಕ್ಕೆ ನಡೆಯುವ ಒಲಂಪಿಕ್ಸ್​ಗೆ ಕರ್ನಾಟಕದಿಂದ ಕನಿಷ್ಠ 100 ಮಂದಿ ಜನ ಕ್ರೀಡಾಪಟುಗಳನ್ನು ಕಳುಹಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. 

ಈ ಕುರಿತು ಮಾಹಿತಿ ನೀಡಿರುವ ಕ್ರೀಡಾ ಸಚಿವ ಕೆ.ಸಿ.ನಾರಾಯಣ ಗೌಡ ಅವರು,  ಗಾಗಲೇ ರಾಜ್ಯದ 35 ಕ್ರೀಡಾಪಟುಗಳನ್ನು ಗುರುತಿಸಲಾಗಿದೆ. ಅವರಿಗೆ ತಲಾ 5 ಲಕ್ಷ ಪ್ರೋತ್ಸಾಹಧನ ನೀಡಲಾಗುವುದು ಎಂದು  ಹೇಳಿದ್ದಾರೆ. 

ಖೇಲೋ ಇಂಡಿಯಾ ಕ್ರೀಡಾಕೂಟವನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತದೆ. ದೇಶದ ಎಲ್ಲೆಡೆಯಿಂದ 7,000 ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಇದೆ. ಮಂದಿನ ಮಾರ್ಚ್ 5 ರಿಂದ 12 ದಿಂದ ಖೇಲೋ ಇಂಡಿಯಾ ಗೇಮ್ಸ್ ನಡೆಯಲಿದೆ. ಕಳೆದ 4 ವರ್ಷಗಳಿಂದ ಸ್ಥಗಿತಗೊಂಡಿದ್ಸ ಜಕ್ಕೂರು ವೈಮಾನಿಕ ತರಬೇತಿ ಶಾಲೆ ಸೆಪ್ಟೆಂಬರ್​ನಿಂದ ಆರಂಭವಾಗಲಿದೆ. ಅಲ್ಲಿ ವಾರ್ಷಿಕ 100 ಪೈಲಟ್​ಗಳಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ತರಬೇತಿ ಶಾಲೆ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com