ಕಲಬುರಗಿ: ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ: ಜನಾರ್ಶೀವಾದ ಯಾತ್ರೆ ಆಯೋಜಕರ ವಿರುದ್ಧ ಕೇಸ್

ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಜನಾರ್ಶೀವಾದ ಯಾತ್ರೆಯ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಲಬುರಗಿ ತಹಶೀಲ್ದಾರ್...
ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು
ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು
Updated on

ಕಲಬುರಗಿ: ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಜನಾರ್ಶೀವಾದ ಯಾತ್ರೆಯ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಲಬುರಗಿ ತಹಶೀಲ್ದಾರ್ ಅವರು ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಮತ್ತು ನಗರದ ಬ್ರಹ್ಮಪುರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ವಾರ್ಡ್ ಸಂಖ್ಯೆ 41, 42 ಮತ್ತು 43 ರ ಸೆಕ್ಟೋರಲ್ ಮ್ಯಾಜಿಸ್ಟ್ರೇಟ್ ಮತ್ತು ಸರ್ಕಲ್ ಇನ್ಸ್‌ಪೆಕ್ಟರ್ ಗೆ ತಹಶೀಲ್ದಾರ್ ಪ್ರಕಾಶ್ ಕುದ್ರೆ ಅವರು ಪತ್ರ ಬರೆದಿದ್ದು, ಬಿಜೆಪಿ ಸ್ಥಳೀಯ ಘಟಕವು ಸೋಮವಾರ ಸಂಜೆ ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿ ಜನಾಶೀರ್ವಾದ ಯಾತ್ರೆಯನ್ನು ಆಯೋಜಿಸಿದೆ ಎಂದು ಹೇಳಿದ್ದಾರೆ. 

ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಈ ಯಾತ್ರೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾಡಳಿತದ ಅನುಮತಿಯಿಲ್ಲದೆ ಆಯೋಜಕರು ಸೋಮವಾರ ವೀರಶೈವ ಕಲ್ಯಾಣ ಕರ್ನಾಟಕ ಮಂಟಪದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು(ಜನಾಶೀರ್ವಾದ ಯಾತ್ರೆ) ಏರ್ಪಡಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕೋವಿಡ್ ನೈಟ್ ಕರ್ಫ್ಯೂ ಜಾರಿಯಲ್ಲಿದ್ದರೂ ಕೋವಿಡ್ -19 ಪ್ರೋಟೋಕಾಲ್ ಉಲ್ಲಂಘಿಸಿ ಕಾರ್ಯಕ್ರಮವನ್ನು ರಾತ್ರಿಯವರೆಗೆ ಮುಂದುವರೆಸಲಾಗಿದೆ. 

ಕಲಬುರಗಿ ಜಿಲ್ಲಾಧಿಕಾರಿಗಳ ಮೌಖಿಕ ಸೂಚನೆಯಂತೆ ನಾನು ಈ ಪತ್ರ ಬರೆಯುತ್ತಿದ್ದು, ಕೋವಿಡ್ -19 ಪ್ರೋಟೋಕಾಲ್‌ಗಳ ಉಲ್ಲಂಘಿಸಿದ ಕಾರ್ಯಕ್ರಮದ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸುವಂತೆ ತಹಶೀಲ್ದಾರ್ ಪ್ರಕಾಶ್ ಕುದ್ರೆ ಅವರು ಪೊಲೀಸರಿಗೆ ಸೂಚಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕಲಬುರಗಿ ಪೊಲೀಸ್ ಆಯುಕ್ತ ರವಿಕುಮಾರ್, ಪೊಲೀಸ್ ಇಲಾಖೆಯು ತಹಶೀಲ್ದಾರರಿಂದ ಪತ್ರವನ್ನು ಸ್ವೀಕರಿಸಿದ್ದು, ಈ ವಿಷಯವನ್ನು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ಏತನ್ಮಧ್ಯೆ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಾ.ಶರಣ ಪ್ರಕಾಶ್ ಪಾಟೀಲ್ ಅವರು, ಕಾರ್ಯಕ್ರಮದ ಆಯೋಜಕರ ವಿರುದ್ಧ ತಕ್ಷಣವೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com