ಬಾಗಲಕೋಟೆ: ಒಂದೇ ಕುಟುಂಬದ ಮೂವರು ನೀರು ಪಾಲು

ನದಿಯಲ್ಲಿ‌ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬಾದಾಮಿ ತಾಲೂಕಿನ ಶಿವಯೋಗಿ ಮಂದಿರದ ಬಳಿ ನಡೆದಿದೆ. ಮೃತರನ್ನು ವಿಶ್ವನಾಥ್ ಮಾವಿನ ಮರದ (40), ಪತ್ನಿ ಶ್ರಿದೇವಿ ಮಾವಿನಮರದ (32) ಹಾಗೂ ಮಗಳು ನಂದಿನಿ (12) ಎಂದು ಗುರುತಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬಾಗಲಕೋಟೆ: ನದಿಯಲ್ಲಿ‌ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬಾದಾಮಿ ತಾಲೂಕಿನ ಶಿವಯೋಗಿ ಮಂದಿರದ ಬಳಿ ನಡೆದಿದೆ. ಮೃತರನ್ನು ವಿಶ್ವನಾಥ್ ಮಾವಿನ ಮರದ (40), ಪತ್ನಿ ಶ್ರಿದೇವಿ ಮಾವಿನಮರದ (32) ಹಾಗೂ ಮಗಳು ನಂದಿನಿ (12) ಎಂದು ಗುರುತಿಸಲಾಗಿದೆ.

ಮೃತರು ಮೂಲತಃ ಗುಳೇದಗುಡ್ಡ ತಾಲ್ಲೂಕಿನ ಕೊಟೇಕಲ್ ಗ್ರಾಮದವರಾಗಿದ್ದು, ಗದಗ ಜಿಲ್ಲೆಯ ರೋಣದಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.

ಶಿವಯೋಗ ಮಂದಿರಕ್ಕೆ ತೆರಳಿದ್ದ ಇರುವ ಉಪಹಾರ ಸೇವಿಸಲು ಮಲಪ್ರಭಾ ನದಿ ದಡದಲ್ಲಿ ಕುಳಿತಿದ್ದರು. ಉಪ ಹಾರ ಸೇವಿಸಿ ನಂದಿನಿ ಮಾವಿನ ಮರದ ನದಿಯಲ್ಲಿ ಕೈ ತೊಳೆಯಲು ಹೋದಾಗ ಜಾರಿ ನದಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ವಿಶ್ವನಾಥ್ ಹಾಗೂ ಶ್ರಿದೇವಿ ದಂಪತಿ ನೀರಿಗೆ ಇಳಿದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿ ಶ್ರೀದೇವಿ ಅವರ ಶವವನ್ನು ಹೊರತೆ ತೆಗೆಯಲಾಗಿದೆ. ಆದರೆ, ವಿಶ್ವನಾಥ್ ಹಾಗೂ ಅವರ ಮಗಳು ನಂದಿನಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ಬಾದಾಮಿ ಪಿಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com