ಚಿಕ್ಕಬಳ್ಳಾಪುರ: ಶಾಲೆಗೆ ಆಗಮಿಸಿದ ಸಚಿವ ಸುಧಾಕರ್‌ಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

ರಾಜ್ಯದಲ್ಲಿ ಸೋಮವಾರದಿಂದ 9, 10 ಸೇರಿದಂತೆ ಪಿಯು ಕಾಲೇಜುಗಳ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರೌಢ ಶಾಲೆ ಹಾಗೂ ವಾಪಸಂದ್ರ ಪ್ರೌಢ ಶಾಲೆಗಳಿಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಭೇಟಿ ನೀಡಿದರು.
ಸಚಿವ ಸುಧಾಕರ್'ಗೆ ರಾಖಿ ಕಟ್ಟುತ್ತಿರುವ ವಿದ್ಯಾರ್ಥಿನಿಯರು
ಸಚಿವ ಸುಧಾಕರ್'ಗೆ ರಾಖಿ ಕಟ್ಟುತ್ತಿರುವ ವಿದ್ಯಾರ್ಥಿನಿಯರು
Updated on

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಸೋಮವಾರದಿಂದ 9, 10 ಸೇರಿದಂತೆ ಪಿಯು ಕಾಲೇಜುಗಳ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರೌಢ ಶಾಲೆ ಹಾಗೂ ವಾಪಸಂದ್ರ ಪ್ರೌಢ ಶಾಲೆಗಳಿಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಭೇಟಿ ನೀಡಿದರು.

ಸಚಿವ ಸುಧಾಕರ್ ಅವರು ಮೊದಲಿಗೆ ನಗರದ ಜೂನಿಯರ್ ಕಾಲೇಜಿನ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿದರು, ಈ ವೇಳೆ ವಿದ್ಯಾರ್ಥಿಗಳು ಚಾಕಲೇಟ್, ಗುಲಾಬಿ ಹೂ ಕೊಟ್ಟು ಸ್ವಾಗತ ಕೋರಿದರು.

 ನಂತರ ವಾಪಸಂದ್ರ ಪ್ರೌಢ ಶಾಲೆಗೆ ಭೇಟಿ ನೀಡಿದ ಸಚಿವರು ಅಲ್ಲೂ ವಿದ್ಯಾರ್ಥಿಗಳಿಗೆ ಚಾಕಲೇಟ್, ಹೂ ಕೊಟ್ಟು ಶುಭ ಹಾರೈಸಿದರು. ಇದೇ ವೇಳೆ ವಿದ್ಯಾರ್ಥಿನಿಯರು ಸಚಿವರಿಗೆ ರಾಖಿ ಕಟ್ಟಿ ರಕ್ಷಾ ಬಂಧನದ ಶುಭಾಶಯ ತಿಳಿಸಿದರು.

ಬಳಿಕ ಮಾತನಾಡಿದ ಸುಧಾಕರ್ ಅವರು, ಕೋವಿಡ್ ಬಂದ ನಂತರ ಕಳೆದ ಒಂದೂವರೆ ವರ್ಷದಿಂದ ಶಾಲೆಗಳ ಆರಂಭ ಆಗಿರಲಿಲ್ಲ. ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟ ಸಂಭವಿಸಿದ್ದು. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಮಂಕಾಗಿತ್ತು. ವಿದ್ಯಾರ್ಥಿಗಳ ಆರೋಗ್ಯದ ಜೊತೆಗೆ ಶೈಕ್ಷಣಿಕ ಬದುಕು ರೂಪಿಸೋದು ಸರ್ಕಾರದ ಬಹುದೊಡ್ಡ ಹೊಣೆಗಾರಿಕೆ, ಜವಾಬ್ದಾರಿ, ಹೀಗಾಗಿ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಜೊತೆ ಶಾಲೆಗಳ ಆರಂಭ ಮಾಡಲಾಗಿದೆ ಎಂದು ಹೇಳಿದರು. 

ಮುಂದಿನ ದಿನಗಳಲ್ಲಿ ತಾಂತ್ರಿಕ ಸಲಹ ಸಮಿತಿ ಜೊತೆ ಚರ್ಚೆ ಮಾಡಿ ಎಲ್ಲಾ ತರಗತಿಗಳ ಪ್ರಾರಂಭದ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿದ್ಯಾರ್ಥಿಗಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಶಾಲೆಗಳಿಗೆ ಭೇಟಿ ನೀಡಲಾಗಿದೆ. ಇದೇ ವೇಳೆ ಇಂದಿನಿಂದ ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗಿದ್ದು. ಇದೊಂದು ಉತ್ತಮ ಶಿಕ್ಷಣ ನೀತಿ. ಈ ನೀತಿ ಜಾರಿಗೆ ಬರುವ ಮುನ್ನ ಚರ್ಚೆಗೆ ಅವಕಾಶ ಇತ್ತು. ಆಗ ಸಿದ್ದರಾಮಯ್ಯ ನವರು ಸಹ ಸಲಹೆ ಗಳನ್ನ ಕೊಡಬಹುದಿತ್ತು. ಆದರೆ ಈಗ ಅಪಸ್ವರ ಅನುಮಾನ ಪಡೋದಯ ಸರಿಯಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com