ಮಂಗಳೂರು: ವಿಶ್ವ ಹಿಂದೂ ಪರಿಷದ್ ಮುಖಂಡರ ಮೀನು ಮಾರಾಟ ಮಳಿಗೆಗೆ ದುಷ್ಕರ್ಮಿಗಳಿಂದ ಬೆಂಕಿ

ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕೋಮು ಸೌಹಾರ್ದತೆ ಕದಡುವ ಸಲುವಾಗಿ ದುಷ್ಕರ್ಮಿಗಳು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಿದ್ದಾರೆ.
ಬೆಂಕಿ ಅವಘಡದಲ್ಲಿ ಸುಟ್ಟು ಕರಕಲಾಗಿರುವ ಮೀನುಗಳು
ಬೆಂಕಿ ಅವಘಡದಲ್ಲಿ ಸುಟ್ಟು ಕರಕಲಾಗಿರುವ ಮೀನುಗಳು
Updated on

ಮಂಗಳೂರು: ಅಪರಿಚಿತ ದುಷ್ಕರ್ಮಿಗಳು ವಿಶ್ವ ಹಿಂದೂ ಪರಿಷದ್ (ವಿ ಎಚ್ ಪಿ) ಮುಖಂಡರಿಗೆ ಸೇರಿದ ಮೀನು ಮಾರಾಟ ಅಂಗಡಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಉಪ್ಪಿನಂಗಡಿಯ ಹಳೇಗೇಟು ಎಂಬಲ್ಲಿ ಈ ಘಟನೆ 
ನಡೆದಿದೆ. ಭಾನುವಾರ ರಾತ್ರಿ ಬೆಂಕಿ ಹಚ್ಚಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.

ರಾಜ್ಯ ಹೆದ್ದಾರಿಯ ಸಮೀಪದಲ್ಲಿ ಈ ಅಂಗಡಿ ಇತ್ತು. ಅಂಗಡಿ ಮಾಲೀಕ ಅಶೋಕ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಅಂಗಡಿಯಲ್ಲಿ ಮೀನು ಮತ್ತು ಮಂಜುಗಡ್ಡೆ ಇಡಲಾಗಿತ್ತು ಎಂದಿದ್ದಾರೆ. 

ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕೋಮು ಸೌಹಾರ್ದತೆ ಕದಡುವ ಸಲುವಾಗಿ ದುಷ್ಕರ್ಮಿಗಳು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಿದ್ದಾರೆ. ಪುತ್ತೂರು ಶಾಸಕರು ಕೂಡಾ ಸ್ಥಳಕ್ಕೆ ಆಗಮಿಸಿದ್ದು, ಶೀಘ್ರವಾಗಿ ದುಷ್ಕರ್ಮಿಗಳನ್ನು ಪತ್ತೆ ಹಚ್ಚುವಂತೆ ಪುತ್ತೂರು ಡಿ ವೈ ಎಸ್ ಪಿ ಅವರಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com