ಗ್ರಾಮೀಣ ಪ್ರದೇಶದ ಜನರಿಗೆ ಕೋವಿಡ್ ಲಸಿಕೆ ನೀಡಲು ಮೊಬೈಲ್ ಬಸ್ ಆರಂಭ: ಡಾ. ದೇವಿ ಶೆಟ್ಟಿ

ದೇಶದ ಗ್ರಾಮೀಣ ಪ್ರದೇಶಗಳ ಜನತೆಗೆ ಮುಖ್ಯವಾಗಿ ಕೋವಿಡ್ ಲಸಿಕೆ ನೀಡುವ ಉದ್ದೇಶದಿಂದ ವೊಲ್ವೊ ಮತ್ತು ನಾರಾಯಣ ಹೃದಯಾಲಯ ಆಸ್ಪತ್ರೆ ಅಭಿವೃದ್ಧಿಪಡಿಸಿರುವ ಮೊಬೈಲ್ ಲಸಿಕೆ ಬಸ್ಸಿಗೆ ಚಾಲನೆ ನೀಡಲಾಗಿದೆ.
ಡಾ ದೇವಿಶೆಟ್ಟಿ
ಡಾ ದೇವಿಶೆಟ್ಟಿ
Updated on

ಬೆಂಗಳೂರು: ದೇಶದ ಗ್ರಾಮೀಣ ಪ್ರದೇಶಗಳ ಜನತೆಗೆ ಮುಖ್ಯವಾಗಿ ಕೋವಿಡ್ ಲಸಿಕೆ ನೀಡುವ ಉದ್ದೇಶದಿಂದ ವೊಲ್ವೊ ಮತ್ತು ನಾರಾಯಣ ಹೃದಯಾಲಯ ಆಸ್ಪತ್ರೆ ಅಭಿವೃದ್ಧಿಪಡಿಸಿರುವ ಮೊಬೈಲ್ ಲಸಿಕೆ ಬಸ್ಸಿಗೆ ಚಾಲನೆ ನೀಡಲಾಗಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಾರಾಯಣ ಹೃದಯಾಲಯದ ನಿರ್ದೇಶಕ ಹಾಗೂ ಮುಖ್ಯ ವೈದ್ಯ ಡಾ ದೇವಿ ಶೆಟ್ಟಿ, ಗ್ರಾಮಾಂತರ ಪ್ರದೇಶದಲ್ಲಿರುವವರಿಗೆ ಲಸಿಕೆ ನೀಡುವುದು ಸವಾಲಾಗಿದೆ. ಅಲ್ಲಿನ ಜನರಿಗೆ ನಗರ ಪ್ರದೇಶಗಳಿಗೆ ಬರುವುದಕ್ಕೆ ಸಹ ಕಷ್ಟವಿರುತ್ತದೆ, ಅಂತವರಿಗೆ ಈ ಸೌಲಭ್ಯದಿಂದ ಅನುಕೂಲವಾಗಲಿದೆ ಎಂದರು.

ಗ್ರಾಮೀಣ ಪ್ರದೇಶಗಳ ಜನರ ಮನೆಬಾಗಿಲಿಗೆ ಹೋಗಿ ಲಸಿಕೆ ನೀಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ವೊಲ್ವೊ ಜೊತೆ ನಾವು ಈ ಮೊಬೈಲ್ ಬಸ್ಸನ್ನು ಆರಂಭಿಸಿದ್ದು ಅತ್ಯಾಧುನಿಕ ತಂತ್ರಜ್ಞಾನ ಮತ್ತು ವೈದ್ಯಕೀಯ ಸೌಲಭ್ಯವನ್ನು ಲಸಿಕೆ ನೀಡಿಕೆಗೆ ಹೊಂದಿದೆ. ವೈದ್ಯರು, ನರ್ಸರು ಸಹ ಸೇವೆಗೆ ಲಭ್ಯರಿರುತ್ತಾರೆ ಎಂದರು.

ಗ್ರಾಮೀಣ ಪ್ರದೇಶದ ಸಾವಿರಾರು ಜನತೆಗೆ ಇದರಿಂದ ನೆರವಾಗಲಿದ್ದು ಇದು ಸಂಪೂರ್ಣ ಉಚಿತವಾಗಿರುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com