ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಆಗಸ್ಟ್ 30 ರಂದು ನಗರದಲ್ಲಿ ಮಾಂಸ ಮಾರಾಟ ನಿಷೇಧ

ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಆಗಸ್ಟ್‌ 30ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧ ಹೇರಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಆಗಸ್ಟ್‌ 30ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧ ಹೇರಿದೆ ಎಂದು ತಿಳಿದುಬಂದಿದೆ.

ಪಾಲಿಕೆಯ ಆದೇಶದಂತೆ ನಗರದಲ್ಲಿರುವ ಎಲ್ಲಾ ಮಾಂಸದ ಅಂಗಡಿಗಳು ಸೋಮವಾರ ಬಂದ್‌ ಆಗಿರಲಿವೆ.

ಮಕ್ಕಳೂ ಸೇರಿದಂತೆ ಎಲ್ಲಾ ವರ್ಗದವರೂ ಭಕ್ತಿ ಮತ್ತು ಸಂಭ್ರಮದೊಂದಿಗೆ ಆಚರಿಸುವ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸೋಮವಾರ ಆಚರಿಸಲಾಗುತ್ತಿದ್ದು, ಈಗಾಗಲೇ ಬೆಂಗಳೂರು ನಗರದ ನಾನಾ ದೇವಾಲಯಗಳಲ್ಲಿ ಸಿದ್ಧತೆಗಳು ಆರಂಭವಾಗಿವೆ. 

ಇಸ್ಕಾನ್‌ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಎರಡು ದಿನ ಶ್ರೀ ಕೃಷ್ಣನ ಜನ್ಮದಿನವನ್ನು ಆಚರಿಸಲಾಗುತ್ತದೆ. ಅದರಂತೆ ಈ ಬಾರಿಯೂ ಆಗಸ್ಟ್ 29ರಂದು ಭಾನುವಾರ ಆನ್‌ಲೈನ್‌ ಮೂಲಕ ಮತ್ತು ಆಗಸ್ಟ್ 30ರಂದು ಸೋಮವಾರ ಭೌತಿಕವಾಗಿ ಆಚರಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com