ಸಂಜೆ 6.30ರ ನಂತರ ವಿದ್ಯಾರ್ಥಿನಿಯರ ಓಡಾಟಕ್ಕೆ ಮೈಸೂರು ವಿ.ವಿ. ನಿರ್ಬಂಧ: ವ್ಯಾಪಕ ಟೀಕೆ, ವಿರೋಧ

ಚಾಮುಂಡಿ ಬೆಟ್ಟದ ತಪ್ಪಲಿನ ಜನಸಂಚಾರ ವಿರಳವಿರುವ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ಆದ ಮೇಲೆ ಶತಮಾನಗಳಷ್ಟು ಹಳೆಯ ಮೈಸೂರು ವಿಶ್ವವಿದ್ಯಾಲಯ ಸುತ್ತೋಲೆಯೊಂದನ್ನು ಹೊರಡಿಸಿದ್ದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
ಮೈಸೂರು ವಿವಿ
ಮೈಸೂರು ವಿವಿ
Updated on

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನ ಜನಸಂಚಾರ ವಿರಳವಿರುವ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ಆದ ಮೇಲೆ ಶತಮಾನಗಳಷ್ಟು ಹಳೆಯ ಮೈಸೂರು ವಿಶ್ವವಿದ್ಯಾಲಯ ಸುತ್ತೋಲೆಯೊಂದನ್ನು ಹೊರಡಿಸಿದ್ದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಸಂಜೆ 6.30ರ ನಂತರ ವಿದ್ಯಾರ್ಥಿನಿಯರು, ಹೆಣ್ಣುಮಕ್ಕಳು ಕ್ಯಾಂಪಸ್ ಸುತ್ತಮುತ್ತ ಓಡಾಡುಂತಿಲ್ಲ, ಅವರ ಚಲನವಲನಗಳನ್ನು ನಿರ್ಬಂಧಿಸಿ ವಿಶ್ವವಿದ್ಯಾಲಯ ಆದೇಶ ಹೊರಡಿಸಿದ್ದು ವಿದ್ಯಾರ್ಥಿಗಳನ್ನು ಕೆರಳಿಸಿದೆ.

ಈ ಸುತ್ತೋಲೆಗೆ ರಿಜಿಸ್ಟ್ರಾರ್ ಸಹಿ ಹಾಕಿದ್ದು ಅದರ ಪ್ರತಿಯೊಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಲಭ್ಯವಾಗಿದೆ. ಸಾಯಂಕಾಲ 6.30ರ ನಂತರ ಕ್ಯಾಂಪಸ್ ನೊಳಗೆ ವಿದ್ಯಾರ್ಥಿನಿಯರು ಓಡಾಡಬಾರದು ಅಲ್ಲದೆ ಕ್ಯಾಂಪಸ್ ನಲ್ಲಿ ಒಬ್ಬರೇ ಕಾಣಿಸಿಕೊಳ್ಳಬಾರದು ಎಂದು ಸುತ್ತೋಲೆಯಲ್ಲಿ ಆದೇಶ ಹೊರಡಿಸಲಾಗಿದೆ.ಗ್ಯಾಂಗ್ ರೇಪ್ ಪ್ರಕರಣದ ನಂತರ ಪೊಲೀಸರ ಆದೇಶದ ಮೇರೆಗೆ ವಿಶ್ವ ವಿದ್ಯಾಲಯ ಈ ಆದೇಶ ಹೊರಡಿಸಿದೆ.

ಆದರೆ ವಿದ್ಯಾರ್ಥಿನಿಯರು ಈ ನಿರ್ಧಾರದ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳಾಗುತ್ತಿರುವ ಈ ಸಂದರ್ಭದಲ್ಲಿ ಯುವತಿಯರಿಗೆ ನೀಡಲಾಗುತ್ತಿರುವ ನಿಜವಾದ ಸ್ವಾತಂತ್ರ್ಯ ಇದೇನಾ ಎಂದು ಪ್ರಶ್ನಿಸಿದ್ದಾರೆ.

ಪರಿಸರ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಮೋನಿಕಾ, ಕ್ಯಾಂಪಸ್‌ನಲ್ಲಿ ಸುಮಾರು ಶೇಕಡಾ 70ರಷ್ಟು ವಿದ್ಯಾರ್ಥಿಗಳು ಹುಡುಗಿಯರು ಮತ್ತು ಕ್ಯಾಂಪಸ್‌ನಲ್ಲಿ ಸಾಕಷ್ಟು ಕಣ್ಗಾವಲು ಮತ್ತು ಭದ್ರತೆ ಇದ್ದಾಗ ಅಂತಹ ನಿರ್ಬಂಧಗಳ ಅಗತ್ಯವೇನಿದೆ ಎಂದು ಪ್ರಶ್ನಿಸಿದ್ದಾರೆ.

"ಸಂಶೋಧನಾ ವಿದ್ಯಾರ್ಥಿಗಳಾದ ನಾವು ಸಮಯಕ್ಕೆ ಸರಿಯಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ಈಗ, ನಾವು ಸುತ್ತೋಲೆಯ ಪ್ರಕಾರ ಸಂಜೆ 6.30 ಕ್ಕೆ ಗ್ರಂಥಾಲಯದಲ್ಲಿ ಪುಸ್ತಕಗಳನ್ನು ಉಲ್ಲೇಖಿಸುವಂತಹ ಸಂಶೋಧನಾ ಕಾರ್ಯವನ್ನು ನಿಲ್ಲಿಸಬೇಕು. ವಿಶ್ವವಿದ್ಯಾಲಯವು ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಮತ್ತು ಸುತ್ತೋಲೆ ಹೊರಡಿಸುವ ಮೊದಲು ಅವರ ಅಭಿಪ್ರಾಯವನ್ನು ಕೇಳಬೇಕು ಎಂದು ಹೇಳುತ್ತಾರೆ.

ಇನ್ನೊಬ್ಬ ವಿದ್ಯಾರ್ಥಿನಿ ಕಾವೇರಿ, ಈ ನಿಯಮವನ್ನು ಕೇವಲ ವಿದ್ಯಾರ್ಥಿನಿಯರಿಗೆ ಮಾತ್ರ ಏಕೆ ಸೀಮಿತಗೊಳಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ. ನಾವು ಮಹಿಳಾ ಸಬಲೀಕರಣ, ಸಮಾನತೆಯ ಬಗ್ಗೆ ಮಾತನಾಡುತ್ತೇವೆ ... ಆದರೆ ಸುತ್ತೋಲೆ ಮಹಿಳೆಯರಿಗೆ ಮಾತ್ರ ಏಕೆ ಎಂದು ಅವರು ಕೇಳುತ್ತಾರೆ.

ವಿದ್ಯಾರ್ಥಿನಿಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈಗಾಗಲೇ ಈ ಕುರಿತು ಸುತ್ತೋಲೆ ಹೊರಡಿಸಲಾಗಿದೆ ಎಂದು ರಿಜಿಸ್ಟ್ರಾರ್ ಆರ್ ಶಿವಪ್ಪ ತಿಳಿಸಿದ್ದಾರೆ. ಕುಕ್ಕರಹಳ್ಳಿ ಕೆರೆಗೆ ಸಂಜೆ 6.30 ರ ನಂತರ ಸಾರ್ವಜನಿಕರ ಪ್ರವೇಶವನ್ನು ಅಧಿಕಾರಿಗಳು ನಿರ್ಬಂಧಿಸಿದ್ದು ಇದು ವಿಶ್ವವಿದ್ಯಾಲಯದ ಆವರಣದಲ್ಲಿ ಬರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com