ಸಾಂದರ್ಭಿಕ ಚಿತ್ರ
ರಾಜ್ಯ
ನೆಲಮಂಗಲ: ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ದುರ್ಮರಣ
ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನಲ್ಲಿರುವ ನೆಲಮಂಗಲ ಸಮೀಪದ ಹುಳ್ಳೇಗೌಡನಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನಲ್ಲಿರುವ ನೆಲಮಂಗಲ ಸಮೀಪದ ಹುಳ್ಳೇಗೌಡನಹಳ್ಳಿಯಲ್ಲಿ ನಡೆದಿದೆ.
13 ವರ್ಷದ ಏಕಾಕ್ಷ ಮತ್ತು 11 ವರ್ಷದ ಭರತ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಏಕಾಕ್ಷ ಹಾಗೂ ಭರತ್, ಬಸವನಹಳ್ಳಿ ವೆಂಕಟೇಶ್ ಮತ್ತು ನೇತ್ರಾವತಿ ದಂಪತಿಯ ಮಕ್ಕಳಾಗಿದ್ದಾರೆ. ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ