ಲವ್ ಜಿಹಾದ್ ನಿಷೇಧ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ಸರ್ಕಾರ ಜಾರಿಗೆ ತರುತ್ತದೆ: ಸಚಿವ ವಿ.ಸುನಿಲ್ ಕುಮಾರ್

ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್
Updated on

ಬೆಳಗಾವಿ: ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಚಳಿಗಾಲ ಅಧಿವೇಶನ ಆರಂಭಕ್ಕೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆಯನ್ನು ತರುತ್ತೇವೆ ಎಂದರು. ಬಿಜೆಪಿ ಮೊದಲಿನಿಂದಲೂ ಗೋಹತ್ಯೆ ನಿಷೇಧ ಕಾಯ್ದೆ ತರುವುದಾಗಿ ಹೇಳಿತ್ತು. ಅದರಂತೆ ಅದನ್ನೂ ತಂದೆವು. ಈಗ ಮತಾಂತರ ನಿಷೇಧ ಕಾಯ್ದೆಯನ್ನು ತರುತ್ತೇವೆ. ಈ ಅಧಿವೇಶನದಲ್ಲಿ ಅದನ್ನು ತರುತ್ತೇವೆ. ಮತಾಂತರವನ್ನು ಮಹಾತ್ಮ ಗಾಂಧಿ, ವಿವೇಕಾನಂದ ಕೂಡ ವಿರೋಧಿಸಿದ್ದರು. ಈಗ ಈ ಕಾಯ್ದೆಗೆ ಕಾನೂನಿನ ಸ್ವರೂಪ ತರುತ್ತಿದ್ದೇವೆ. ಈ ವಿಚಾರದಲ್ಲಿ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.

ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್ ಯಾಕೆ ವಿರೋಧ ಮಾಡುತ್ತಿದೆ ಯಾವ ಯಾವ ಕಾರಣಕ್ಕೆ ಮತಾಂತರ ಆಗುತ್ತಿದೆ? ಅದರ ದುಷ್ಪರಿಣಾಮ ಏನು ಎಂಬುದು ಗೊತ್ತಿದೆ. ಕೇವಲ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಕಾಯ್ದೆ ತರುತ್ತಿಲ್ಲ. ಈ ಬಗ್ಗೆ ಚರ್ಚೆ ನಡೆಸಲು ಕೂಡ ಸರ್ಕಾರ ಸಿದ್ದವಿದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com