ರೈಲು ವಿಳಂಬದಿಂದ ಪರೀಕ್ಷೆಗೆ ಗೈರು: ಡಿಸೆಂಬರ್ 29 ರಂದು ಕೆಪಿಎಸ್ ಸಿ ಮರು ಪರೀಕ್ಷೆ

ರೈಲು ವಿಳಂಬದಿಂದ ಲೋಕೋಪಯೋಗಿ ಇಲಾಖೆ ಪರೀಕ್ಷೆಗೆ ಕೆಲ ಪರೀಕ್ಷಾರ್ಥಿಗಳು ಗೈರಾದ ಹಿನ್ನೆಲೆಯಲ್ಲಿ ಗೈರಾದ ಪರೀಕ್ಷಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರೈಲು ವಿಳಂಬದಿಂದ ಲೋಕೋಪಯೋಗಿ ಇಲಾಖೆ ಪರೀಕ್ಷೆಗೆ ಕೆಲ ಪರೀಕ್ಷಾರ್ಥಿಗಳು ಗೈರಾದ ಹಿನ್ನೆಲೆಯಲ್ಲಿ ಗೈರಾದ ಪರೀಕ್ಷಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗವು ಡಿಸೆಂಬರ್ 29ಕ್ಕೆ ಮರು ಪರೀಕ್ಷೆ ನಿಗದಿಪಡಿಸಿದ್ದು, ಬೆಂಗಳೂರಿನಲ್ಲಿ ಡಿಸೆಂಬರ್ 29ರಂದು ಪರೀಕ್ಷೆ ನಡೆಯಲಿದೆ. ಡಿ.22ರೊಳಗೆ ರೈಲು ಟಿಕೆಟ್ ಸಮೇತ ದಾಖಲೆ ಸಲ್ಲಿಕೆಗೆ ಸೂಚಿಸಲಾಗಿದೆ.

ಡಿಸೆಂಬರ್ 14ರಂದು ಲೋಕೋಪಯೋಗಿ ಸಹಾಯಕ ಅಭಿಯಂತರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆದಿತ್ತು. ರೈಲು ವಿಳಂಬದಿಂದ ಸಾವಿರಾರು ಅಭ್ಯರ್ಥಿಗಳು ಪರೀಕ್ಷೆ ಬರೆಯುವುದರಿಂದ ವಂಚಿತರಾಗಿದ್ದರು. ಸಾಮಾನ್ಯ ಪತ್ರಿಕೆ ಪರೀಕ್ಷೆಗೆ ಹಾಜರಾಗದೇ ಅಭ್ಯರ್ಥಿಗಳು ಪರದಾಡಿದ್ದರು.  ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿತ್ತು.

ಐದು ಗಂಟೆ ವಿಳಂಬವಾಗಿ ಕಲಬುರಗಿಗೆ ರೈಲು ಬಂದಿತು. ರೈಲ್ವೆ ಹಳಿ ಮೇಲೆಯೇ ಕುಳಿತು ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸಿ ಮರು ಪರೀಕ್ಷೆಗೆ ಆಗ್ರಹಿಸಿದ್ದರು. ಸದ್ಯ ಈಗ ಡಿಸೆಂಬರ್ 29ಕ್ಕೆ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ.

ರೈಲು ಹಳಿ ಕೆಲಸ ದುರಸ್ಥಿ, ರೈಲುಗಳು ವಿಳಂಬ ಬೆಂಗಳೂರಿನ ಯಲಹಂಕ ಬಳಿ ರೈಲು ಹಳಿ ದುರಸ್ಥಿ ಕಾರ್ಯ ಇದ್ದಿದ್ದರಿಂದ ಯಲಹಂಕ ಬಳಿ ಎರಡು ಗಂಟೆ ರೈಲು ನಿಂತಲ್ಲಿಯೇ ನಿಂತಿತ್ತು. ಯಲಹಂಕ ದಾಟಿದ ಮೇಲೆ ಕೂಡ ಅನೇಕ ಕಡೆ ರೈಲು ನಿಂತಿದ್ದರಿಂದ, ನಿಗದಿತ ಸಮಯಕ್ಕಿಂತ ಐದು ಗಂಟೆ ವಿಳಂಬವಾಗಲು ಪ್ರಮುಖ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com