ಉತ್ತರ ಕರ್ನಾಟಕ ಭಾಗದ ನೀರಾವರಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಶಾಸಕರ ಒತ್ತಾಯ

ಉತ್ತರ ಕರ್ನಾಟಕದಲ್ಲಿ ಬಾಕಿ ಉಳಿದಿರುವ ನೀರಾವರಿ ಯೋಜನೆಗಳು ಮತ್ತು ಇತರ ಅಭಿವೃದ್ಧಿ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಶಾಸಕರು ಒತ್ತಾಯಿಸಿದ್ದಾರೆ.
ಎಂ. ಬಿ ಪಾಟೀಲ್
ಎಂ. ಬಿ ಪಾಟೀಲ್
Updated on

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಬಾಕಿ ಉಳಿದಿರುವ ನೀರಾವರಿ ಯೋಜನೆಗಳು ಮತ್ತು ಇತರ ಅಭಿವೃದ್ಧಿ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಶಾಸಕರು ಒತ್ತಾಯಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ (ಯುಕೆಪಿ) ಅನುಷ್ಠಾನಕ್ಕೆ ಒತ್ತಾಯಿಸಿದ ಮಾಜಿ ಸಚಿವ ಎಂಬಿ ಪಾಟೀಲ್  ಕೇಂದ್ರದ ಮೇಲೆ ಒತ್ತಡ ಹೇರಿ ರಾಜ್ಯಪತ್ರ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಿದರು. ಮಾರ್ಗಸೂಚಿ ಗೊಂದಲದಿಂದಾಗಿ ಭೂಸ್ವಾಧೀನ ಪ್ರಕ್ರಿಯೆಗೆ ಅಡ್ಡಿಯಾಗಿದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಮಾಡಲಿರುವ ಬಗ್ಗೆ ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣಾ ಕಾರಣದಿಂದ ಮೇಕೆದಾಟು ಪಾದಯಾತ್ರೆ ಆಗುತ್ತಿದೆ. ಜೆಡಿಎಸ್ ಪಾದಯಾತ್ರೆ ಮಾಡುತ್ತೆ ಎಂದು ಆತುರದಲ್ಲಿ ಹೊರಟಿದ್ದಾರೆ. ಚುನಾವಣೆ ಕಾರಣಕ್ಕಾಗಿ ಸುತ್ತಾಡಿಕೊಂಡು ಬರುತ್ತಾರಂತೆ ಎಂದು ವಿಧಾನಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಕಳೆದ 11 ವರ್ಷಗಳಲ್ಲಿ ಅಗತ್ಯವಿದ್ದ 1.33 ಲಕ್ಷ ಎಕರೆಯಲ್ಲಿ 22,309 ಎಕರೆ ಮಾತ್ರ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೆ, ಯೋಜನೆಗೆ ಬಿಡುಗಡೆಯಾದ 13,320 ಕೋಟಿ ರೂ.ಗಳಲ್ಲಿ ಬಹುಪಾಲು ಮುಖ್ಯ ಕಾಲುವೆಗಳನ್ನು ನಿರ್ಮಿಸಲು ಖರ್ಚು ಮಾಡಲಾಗಿದೆ, ಆದರೆ ವಿತರಕರಿಗೆ ಅಲ್ಲ. ಈ ಯೋಜನೆಯಿಂದ ಕೆಲ ಗುತ್ತಿಗೆದಾರರಿಗೆ ಮಾತ್ರ ಲಾಭವಾಗಿದೆಯೇ ಹೊರತು ರೈತರಿಗಲ್ಲ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com