ಮಂಗಳೂರಿನಲ್ಲಿ ಶೀಘ್ರವೇ ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಕಾರ್ಯಾರಂಭ: ಕೆ. ಸುಧಾಕರ್

ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು (ಪಿಎಚ್‌ಸಿ) ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಮತ್ತು ಗ್ರಾಮಗಳಲ್ಲಿನ ಜನರಿಗೆ ಮೂಲಭೂತ ಆರೋಗ್ಯ ಸೌಲಭ್ಯಗಳು ದೊರೆಯುವಂತೆ ಮಾದರಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು  ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಬುಧವಾರ ಹೇಳಿದ್ದಾರೆ. 
ಕೆ ಸುಧಾಕರ್
ಕೆ ಸುಧಾಕರ್
Updated on

ಮಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು (ಪಿಎಚ್‌ಸಿ) ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಮತ್ತು ಗ್ರಾಮಗಳಲ್ಲಿನ ಜನರಿಗೆ ಮೂಲಭೂತ ಆರೋಗ್ಯ ಸೌಲಭ್ಯಗಳು ದೊರೆಯುವಂತೆ ಮಾದರಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು  ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಬುಧವಾರ ಹೇಳಿದ್ದಾರೆ. ಮಂಗಳೂರಿನಲ್ಲಿ ಜೀನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು  ಅವರು ಹೇಳಿದ್ದಾರೆ. 

ಚಾರ್ಮಾಡಿ ಗ್ರಾಮದಲ್ಲಿ ಪಿಎಚ್‌ಸಿಯ ಹೊಸ ಕಟ್ಟಡವನ್ನು ಉದ್ಘಾಟಿಸಲು ಮತ್ತು ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡದಲ್ಲಿ  ಸಮುದಾಯ ಆರೋಗ್ಯ ಕೇಂದ್ರವನ್ನು ತೆರೆಯಲು ಸುಧಾಕರ್ ದಕ್ಷಿಣ ಕನ್ನಡಕ್ಕೆ ಆಗಮಿಸಿದ್ದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವುದರಿಂದ 250 ಪಿಎಚ್‌ಸಿಗಳನ್ನು ನವೀಕರಿಸಲಾಗುತ್ತಿದೆ ಎಂದರು. ಪದಂಗಡಿಯಲ್ಲಿ 8 ಕೋಟಿ ರೂ.ಗಳ ವೆಚ್ಚದಲ್ಲಿ ಮಾದರಿ ಆಸ್ಪತ್ರೆಯನ್ನು ನಿರ್ಮಿಸಲಾಗುವುದು. ಅಲ್ಲದೆ, ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಮತ್ತು 1,763 ವೈದ್ಯರನ್ನು ನೇಮಿಸಲಾಗಿದ್ದು ಒಂದು ವರ್ಷದ ಗ್ರಾಮೀಣ ಪ್ರದೇಶದ ಸೇವೆ ಕಡ್ಡಾಯದಡಿ  ನಾವು 2,050 ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದೇವೆ. ದಕ್ಷಿಣ ಕನ್ನಡದಲ್ಲಿ ನಾವು 26 ವೈದ್ಯರನ್ನು ನೇಮಿಸಿದ್ದೇವೆ. ಅಲ್ಲದೆ, ದಾದಿಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ ”ಎಂದು ಅವರು ಹೇಳಿದರು.

ಏತನ್ಮಧ್ಯೆ, ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರವು ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ಕೊಡುಗೆಯಾಗಿ 30 ಹಾಸಿಗೆಗಳ ಸಾಮರ್ಥ್ಯವನ್ನು ಹೊಂದಿದೆ ಮತ್ತು ಇದನ್ನು 4.8 ಕೋಟಿ ರೂ.ಗಳ ವೆಚ್ಚದಲ್ಲಿ ನವೀಕರಿಸಲಾಗಿದೆ. "60 ರಷ್ಟು ಅಂಗವೈಕಲ್ಯ ಹೊಂದಿರುವ ಪ್ರತಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ಮಾಸಿಕ 3,000 ರೂ. ಪರಿಹಾರವನ್ನು ಒದಗಿಸಲಾಗಿದೆ ಮತ್ತು ಮುಂದಿನ ದಿನಗಳಲ್ಲಿ ಅದನ್ನು ಹೆಚ್ಚಿಸಲು ಸರ್ಕಾರ ಯೋಜಿಸುತ್ತಿದೆ" ಎಂದು ಸಚಿವರು ಹೇಳಿದರು.

ಸಂಭವನೀಯ ಕೋವಿಡ್ -19 ಮೂರನೇ ಅಲೆ ಎಚ್ಚರಿಕೆಗಾಗಿ  ರಾಜ್ಯದಲ್ಲಿ 153 ಮಕ್ಕಳ ತಜ್ಞರನ್ನು ನೇಮಿಸಲಾಗಿದೆ ಎಂದು ಸುಧಾಕರ್ ಹೇಳಿದರು. "ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಮತ್ತು ನಾವು ಲಸಿಕೆ ಶಿಬಿರಗಳನ್ನು ಹೆಚ್ಚಿಸುತ್ತೇವೆ" ಎಂದು ಅವರು ಹೇಳಿದರು. ಎಂಜಿಎನ್‌ಆರ್‌ಇಜಿಎ ಹಣವನ್ನು ಬಳಸಿಕೊಂಡು ಪಿಎಚ್‌ಸಿಗಳಿಗೆ ಕಾಂಪೌಂಡ್ ಗೋಡೆಗಳನ್ನು ನಿರ್ಮಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಸುಧಾಕರ್, ಈಗಾಗಲೇ 32 ಗೋಡೆಗಳನ್ನು ನಿರ್ಮಿಸಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com