ಕಾಸರಗೋಡು: ಸಮುದ್ರದಲ್ಲಿ ಮಗುಚಿಬಿದ್ದ ದೋಣಿ; ಮೂವರು ಮೀನುಗಾರರು ನಾಪತ್ತೆ

ಮೀನುಗಾರಿಕಾ ದೋಣಿಯೊಂದು ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾದ ಘಟನೆ ಕಾಸರಗೋಡು ಸಮುದ್ರದಲ್ಲಿ ಭಾನುವಾರ ಮುಂಜಾನೆ ನಡೆದಿರುವುದು ವರದಿಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಕಾಸರಗೋಡು: ಮೀನುಗಾರಿಕಾ ದೋಣಿಯೊಂದು ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾದ ಘಟನೆ ಕಾಸರಗೋಡು ಸಮುದ್ರದಲ್ಲಿ ಭಾನುವಾರ ಮುಂಜಾನೆ ನಡೆದಿರುವುದು ವರದಿಯಾಗಿದೆ. 

ದೋಣಿಯಲ್ಲಿ 7 ಮಂದಿ ಮೀನುಗಾರರು ಇದ್ದರೆನ್ನಲಾಗಿದ್ದು. ನಾಲ್ವರು ಈಜಿ ದಡ ಸೇರಿದ್ದಾರೆ. ಸದ್ಯ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ಕಸಬಾ ಕಡಪ್ಪುರದ  ಸಂದೀಪ್(33), ರತೀಶ್(30) ಮತ್ತು ಕಾರ್ತಿಕ್ (29) ಎಂಬುವವರು ನಾಪತ್ತೆಯಾಗಿದ್ದಾರೆಂದು ವರದಿಗಳು ತಿಳಿಸಿವೆ. 

ಘಟನೆಯಲ್ಲಿ ರವಿ(40) , ಶಿಬಿನ್(30) ಹಾಗೂ ಮಣಿಕುಟ್ಟನ್(35) ಎಂಬವರು ಈಜಿ ದಡ ಸೇರಿದ್ದಾರೆ. ಅಸ್ವಸ್ಥಗೊಂಡಿರುವ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಮುದ್ರದ ದೈತ್ಯ ಅಲೆಗಳ ರಭಸಕ್ಕೆ ಫೈಬರ್ ದೋಣಿ ಮಗುಚಿ ಬಿದ್ದು ಈ ಅನಾಹುತ ಸಂಭವಿಸಿದೆ. ಸಮುದ್ರಕ್ಕೆ ಬಿದ್ದು ನಾಪತ್ತೆಯಾದವರಿಗಾಗಿ ಕರಾವಳಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ಮೀನುಗಾರರು ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com