ಬಳ್ಳಾರಿ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಹೋದ ದಂಪತಿ

ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಗಂಡ-ಹೆಂಡತಿ ಇಬ್ಬರೂ ಕೊಚ್ಚಿ ಹೋಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಪಶ್ಚಿಮ ಕಾಲುವೆ ಬಳಿ ಸಂಭವಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬಳ್ಳಾರಿ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಗಂಡ-ಹೆಂಡತಿ ಇಬ್ಬರೂ ಕೊಚ್ಚಿ ಹೋಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಪಶ್ಚಿಮ ಕಾಲುವೆ ಬಳಿ ಸಂಭವಿಸಿದೆ. 

ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಳ್ಳಗಳು ತುಂಬಿದ್ದವು. ಆದರೆ ಕೊಚ್ಚಿ ಹೋದ ದಂಪತಿಗೆ ಹಳ್ಳದ ನೀರಿನ ಮಟ್ಟ ಹೆಚ್ಚಿರುವುದು ತಿಳಿದಿರಲಿಲ್ಲ. ರಾತ್ರಿ ಸಂಬಂಧಿಕರೊಬ್ಬರ ಊರಿಗೆ ಹೋಗಿ ಮನೆಗೆ ವಾಪಾಸಾಗುವ ಹೊತ್ತಿಗೆ ಈ ಘಟನೆ ನಡೆದಿದೆ. 50 ವರ್ಷದ ಮಲ್ಲಿಕಾರ್ಜುನ ಮತ್ತು 46 ವರ್ಷದ ನಿರ್ಮಲಮ್ಮ ನೀರಿನಲ್ಲಿ ಕೊಚ್ಚಿ ಹೋದ ಮೃತ ದುರ್ದೈವಿಗಳು.

ಮೃತ ದಂಪತಿ ಹೊಳೆ ಮುತ್ಕೂರು ಗ್ರಾಮದವರು. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೊದಲು ಮಲ್ಲಿಕಾರ್ಜುನ ಎಂಬುವವರ ಮೃತ ದೇಹ ಪತ್ತೆಯಾಗಿದ್ದು, ನಿರ್ಮಲಮ್ಮನ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿತ್ತು. ಇದೀಗ ಇಬ್ಬರ ಶವ ಸಿಕ್ಕಿದೆ. ತಂಬ್ರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com