ಹಾಯ್ ಬೆಂಗಳೂರು ಮಾಜಿ ಸಂಪಾದಕ ಸುನೀಲ್ ಹೆಗ್ಗರವಳ್ಳಿ ಹೃದಯಘಾತದಿಂದ ನಿಧನ

ಹಿರಿಯ ಕ್ರೈಮ್ ವರದಿಗಾರ, 43 ವರ್ಷದ ಸುನೀಲ್ ಹೆಗ್ಗರವಳ್ಳಿ ಅಕಾಲಿಕ ಸಾವನ್ನಪ್ಪಿದ್ದಾರೆ. 
ಸುನೀಲ್ ಹೆಗ್ಗರವಳ್ಳಿ
ಸುನೀಲ್ ಹೆಗ್ಗರವಳ್ಳಿ
Updated on

ಚಿಕ್ಕಮಗಳೂರು: ಹಿರಿಯ ಕ್ರೈಮ್ ವರದಿಗಾರ, 43 ವರ್ಷದ ಸುನೀಲ್ ಹೆಗ್ಗರವಳ್ಳಿ ಅಕಾಲಿಕ ಸಾವನ್ನಪ್ಪಿದ್ದಾರೆ. 

ಹಾಯ್ ಬೆಂಗಳೂರು ಪತ್ರಿಕೆಯ ಮೂಲಕ ತಮ್ಮ ವೃತ್ತಿಜೀವನವನ್ನುಆರಂಭಿಸಿದ ಸುನೀಲ್ ಹೆಗ್ಗರವಳ್ಳಿ, ತಮ್ಮ ಸ್ವಂತ ಜಿಲ್ಲೆಯಾದ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಹಾಯ್ ಬೆಂಗಳೂರು ಪತ್ರಿಕೆಯ ವರದಿಗಾರರಾಗಿ ಅವರು ಮಾಡಿದ ಸಾಕಷ್ಟು ವರದಿಗಳು ದೊಡ್ಡ ಸಂಚಲನವನ್ನೇ ಮೂಡಿಸಿದ್ದವು. ರವಿ ಬೆಳಗೆರೆಯವರ ಅತ್ಯಾಪ್ತನಾಗಿದ್ದುಕೊಂಡು ನಂತರ ರವಿ‌‌ ಬೆಳಗೆರೆ ಅವರ ಅನಾರೋಗ್ಯದ ಸನ್ನಿವೇಶದಲ್ಲಿ ಪತ್ರಿಕೆಯನ್ನು ಸಂಪಾದಕನಾಗಿ ಮುನ್ನಡೆಸಿದ್ದರು. 

ಆದರೆ ಶೂಟೌಟ್ ವಿವಾದದ ಸನ್ನಿವೇಶದಲ್ಲಿ ರವಿ ಬೆಳಗೆರೆ ಅವರ ಮೇಲೆಯೇ ಸುಪಾರಿ ಆರೋಪ ಮಾಡಿ ಹಾಯ್ ಬೆಂಗಳೂರು ಕಚೇರಿಯಿಂದ ಹೊರಬಿದ್ದಿದ್ದು ರಾಜ್ಯದಲ್ಲಿ ಸುದ್ದಿಯಾಗಿದ್ದರು. ನಂತರ ಚಾರ್ಲಿ ಟೈಮ್ಸ್ ಕ್ರೈಮ್ ಪೇಪರ್ ಶುರುಮಾಡಿದ್ದರು.

ಯೂ ಟ್ಯೂಬ್ ಚಾನೆಲ್ ಕೂಡ ಆರಂಭಿಸಿ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನಕ್ಕೆ ಪತ್ರಕರ್ತ ಸಮೂಹ ವಿಷಾದ-ಸಂತಾಪ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com