ಕೊರೊನಾದಿಂದ ಮೃತಪಟ್ಟ ರೈತರ 1 ಲಕ್ಷ ರೂ. ಸಾಲ ಮನ್ನಾ: ಸಚಿವ ಎಸ್.ಟಿ. ಸೋಮಶೇಖರ್

ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟ ರೈತರ ಸಾಲದಲ್ಲಿ 1 ಲಕ್ಷ ರೂ ವನ್ನು ಮನ್ನಾ ಮಾಡಲಾಗುತ್ತದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.
ಸಚಿವ ಎಸ್ ಟಿ ಸೋಮಶೇಖರ್
ಸಚಿವ ಎಸ್ ಟಿ ಸೋಮಶೇಖರ್
Updated on

ಮಂಗಳೂರು: ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟ ರೈತರ ಸಾಲದಲ್ಲಿ 1 ಲಕ್ಷ ರೂ ವನ್ನು ಮನ್ನಾ ಮಾಡಲಾಗುತ್ತದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ಮಂಗಳೂರಲ್ಲಿ  ಈ ಬಗ್ಗೆ ಮಾಹಿತಿ ನೀಡಿದ ಅವರು, 'ಕೊವಿಡ್‌ನಿಂದ ಮೃತಪಟ್ಟ ರೈತರ ಸಾಲಮನ್ನಾಗೆ ಕರ್ನಾಟಕ ಸರ್ಕಾರ ತೀರ್ಮಾನ ಮಾಡಿದ್ದು, ಕೊರೊನಾದಿಂದ ಮೃತಪಟ್ಟ ರೈತರ ಸಾಲದ ಮೊತ್ತದಲ್ಲಿ 1 ಲಕ್ಷ ರೂಪಾಯಿ ಮನ್ನಾ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಮಾಹಿತಿ ನೀಡಿದರು.

'ಕೊವಿಡ್‌ನಿಂದ ರಾಜ್ಯದಲ್ಲಿ 10,400 ಸಾಲಗಾರ ರೈತರು ಮೃತಪಟ್ಟಿದ್ದಾರೆ. ಇವರ ಸಾಲದ ಮೊತ್ತದಲ್ಲಿ ತಲಾ 1 ಲಕ್ಷ ರೂಪಾಯಿ ಮನ್ನಾ ಮಾಡಲಾಗುವುದು. ಇದರಿಂದಾಗಿ ಸರ್ಕಾರಕ್ಕೆ 81 ಕೋಟಿ ರೂಪಾಯಿ ಹೊರೆಯಾಗಲಿದೆ. ಅಪೆಕ್ಸ್, ಡಿಸಿಸಿ ಬ್ಯಾಂಕ್ & ಪ್ಯಾಕ್ಸ್ ಗಳಲ್ಲಿ ಸಾಲ ಪಡೆದಿದ್ದ ಕೊರೋನಾದಿಂದ  ಮೃತಪಟ್ಟಿರುವ 10187 ರೈತರ 79.47 ಕೋಟಿ ರೂಪಾಯಿ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಿಂತನೆ ನಡೆಸಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com