ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶ ಸಿಗದೆ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಗೆ ಸಚಿವ ಸುರೇಶ್ ಕುಮಾರ್ ಸಹಾಯದ ಭರವಸೆ

ಜುಲೈ 19 ಮತ್ತು ಜುಲೈ 22 ರಂದು ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯಲು ಸಾಧ್ಯವಾಗದಿರುವ ಬಗ್ಗೆ ಚಿಂತೆಗೀಡಾದ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯೊಬ್ಬಳು ಕಳೆದ ರಾತ್ರಿ ಕೊರಟಗೆರೆಯ ಹನುಮಂತಪುರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದಾಳೆಂದು ವರದಿಯಾಗಿದೆ.
ಎಸ್.ಸುರೇಶ್ ಕುಮಾರ್ ಅವರು ಗ್ರೀಷ್ಮಾ ನಾಯಕ್ ಎನ್. ಅವರ ನಿವಾಸದಲ್ಲಿ
ಎಸ್.ಸುರೇಶ್ ಕುಮಾರ್ ಅವರು ಗ್ರೀಷ್ಮಾ ನಾಯಕ್ ಎನ್. ಅವರ ನಿವಾಸದಲ್ಲಿ
Updated on

ತುಮಕೂರು: ಜುಲೈ 19 ಮತ್ತು ಜುಲೈ 22 ರಂದು ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯಲು ಸಾಧ್ಯವಾಗದಿರುವ ಬಗ್ಗೆ ಚಿಂತೆಗೀಡಾದ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯೊಬ್ಬಳು ಕಳೆದ ರಾತ್ರಿ ಕೊರಟಗೆರೆಯ ಹನುಮಂತಪುರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದಾಳೆಂದು ವರದಿಯಾಗಿದೆ.

ಇದಕ್ಕೆ ಶೀಘ್ರವಾಗಿ ಸ್ಪಂದಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಶನಿವಾರ ಬೆಳಿಗ್ಗೆ ವಿದ್ಯಾರ್ಥಿನಿ ಗ್ರೀಷ್ಮಾ ನಾಯಕ್ ಎನ್ ಅವರನ್ನು ಭೇಟಿ ಮಾಡಿ ಪ್ರವೇಶ ಪತ್ರ ದೊರಕದಿದ್ದರೂ ಆಗಸ್ಟ್ ನಲ್ಲಿ ನಡೆಯಲಿರುವ ಪೂರಕ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡುವುದಾಗಿ ಹಾಗೂ ಅಗತ್ಯವಾದ ಎಲ್ಲಾ ನೆರವು ಕೊಡುವುದಾಗಿ ಭರವಸೆ ನೀಡಿದರು.

"ಒಂದು ವರ್ಷ ವ್ಯರ್ಥ ಮಾಡದೆ ಆ ವಿದ್ಯಾರ್ಥಿನಿ ಪಿಯುಸಿಗೆ ಸೇರಲು ಸಾಧ್ಯವಾಗಲಿದೆ ಎಂದು  ನಾನು ಅವಳಿಗೆ ಭರವಸೆ ನೀಡಿದ್ದೆ ಮತ್ತು ಅವಳು ಚೆನ್ನಾಗಿ ತಯಾರಿ ಮಾಡುವುದಾಗಿ ನನಗೆ ಭರವಸೆ ನೀಡಿದಳು. ಈ ಘಟನೆಯಂತಹಾ ಪ್ರಕರಣ ನಡೆಯಬಾರದು. ಹಾಗಾಗಿ ನಾನು ಸಾರ್ವಜನಿಕ ಸೂಚನಾ ವಿಭಾಗದ ಜಂಟಿ ಆಯುಕ್ತರಿಂದ ತನಿಖೆಗೆ ಆದೇಶಿಸುತ್ತೇನೆ" ಎಂದು ಅವರು ಮಾಹಿತಿ ನೀಡಿದರು.

ಅನೇಕ ಜ್ಞಾಪನಗಳ ಹೊರತಾಗಿಯೂ, ರಾಜ್ಯಾದ್ಯಂತ ಹಲವಾರು ವಿದ್ಯಾರ್ಥಿಗಳು ತಮ್ಮ ತರಗತಿಗಳಿಗೆ ಪ್ರವೇಶ ಪಡೆದಿಲ್ಲ ಮತ್ತು ಪರೀಕ್ಷೆಗಳಿಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಅವರು ಒಪ್ಪಿಕೊಂಡರು.

ರೈತ ನರಸಿಂಹಮೂರ್ತಿಯವರ ಪುತ್ರಿಯಾದ ವಿದ್ಯಾರ್ಥಿನಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ವಸತಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿದ್ದಳು. ಆದರೆ ಕೊರೋನಾ ಸಾಂಕ್ರಾಮಿಕ ರೋಗದ ನಂತರದ ಲಾಕ್‌ಡೌನ್ ಮತ್ತು ಸಂಬಂಧಿತ ಸಮಸ್ಯೆಗಳಿಂದಾಗಿ, ಒಂಬತ್ತನೇ ತರಗತಿಯಲ್ಲಿ ಉತ್ತೀರ್ಣರಾದ ನಂತರ ಆಕೆಗೆ ಹತ್ತನೇ ತರಗತಿಗೆ ಪ್ರವೇಶ ಪಡೆಯಲು ಸಾಧ್ಯವಾಗಲಿಲ್ಲ. ಅವಳು ಶುಲ್ಕವನ್ನು ಪಾವತಿಸದ ಕಾರಣ, ಸಂಸ್ಥೆಯು ಅವಳನ್ನು ಪರೀಕ್ಷೆಗೆ ನೋಂದಾಯಿಸಿರಲಿಲ್ಲ.

ಅವರು ಸಹಾಯ ಕೋರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ರಸಪ್ರಶ್ನೆ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ಬಹುಮಾನಗಳು ಸೇರಿದಂತೆ ಅನೇಕ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿ ಒಂಬತ್ತನೇ ತರಗತಿಯ ಪರೀಕ್ಷೆಯಲ್ಲಿ ಶೇಕಡಾ 96 ಅಂಕಗಳನ್ನು ಗಳಿಸಿದ್ದಾರೆ. ಆಕೆ ಮುಂದೆ ಓದಿ ವೈದ್ಯಳಾಗುವ ಕನಸು ಕಾಣುತ್ತಿದ್ದಾಳೆ. "ನೀವು ಜೀವಗಳನ್ನು ಉಳಿಸಲು ಬಯಸಿದರೆ ನೀವು ದೃಢ ಮನಸ್ಕರಾಗಿರಬೇಕು ಎಂದು ನಾನು ಅವಳಿಗೆ ಹೇಳಿದೆ" ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. ಮಧುಗಿರಿ ಶೈಕ್ಷಣಿಕ ಜಿಲ್ಲೆ ಡಿಡಿಪಿಐ ರೇವಣಸಿದ್ದಯ್ಯ ಸಚಿವರೊಂದಿಗೆ ವಿದ್ಯಾರ್ಥಿನಿಯ ಮನೆಗೆ ಹೋಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com