ಮಡಿಕೇರಿ: ಕಾಂಕ್ರೀಟ್ ಮಿಕ್ಸರ್ ವಾಹನ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸಾವು

ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಕಾಂಕ್ರೀಟ್ ಮಿಕ್ಸರ್ ವಾಹನ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.
ಘಟನಾ ದೃಶ್ಯ
ಘಟನಾ ದೃಶ್ಯ
Updated on

ಮಡಿಕೇರಿ: ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಕಾಂಕ್ರೀಟ್ ಮಿಕ್ಸರ್ ವಾಹನ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.

ಮೃತರನ್ನು  ಸಂತೋಷ್, ಪ್ರವೀಣ್ ಎಂದು ಗುರುತಿಸಲಾಗಿದೆ. ಇದುವರೆಗೆ ನಡೆದ ಕಾರ್ಯಾಚರಣೆಯಲ್ಲಿ ಪ್ರವೀಣ್  ಮೃತದೇಹ ಪತ್ತೆಯಾಗಿದ್ದು ಇನ್ನೊಬ್ಬನ ಶವಕ್ಕಾಗಿ ಶೋಧ ಮುಂದುವರಿದಿದೆ.

ರಸ್ತೆಗೆ ತಡೆಗೋಡೆ ನಿರ್ಮಾಣ ಮಾಡುತ್ತಿದ್ದ ವೇಳೆ ಕಾಂಕ್ರೀಟ್ ಲಾರಿ ನಿಂತಿದ್ದ ಸ್ಥಳದಲ್ಲಿ ಮಣ್ನು ಕುಸಿದಿದೆ. ಆ ಸಮಯ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಕ್ಕಿಕೊಂಡಿದ್ದರು. ಆ ಬಳಿಕ ಆ ಮಣ್ಣಿನ ಮೇಲೆ ಕಾಂಕ್ರೀಟ್ ಲಾರಿ ಉರುಳಿ ಬಿದ್ದಿದೆ. ಆಗ ಜೆಸಿಬಿ ಮೂಲಕ ಲಾರಿಯನ್ನು ಮೇಲೆತ್ತಲಾಗಿದ್ದು ಮಣ್ಣಿನಡಿ ಸಿಕ್ಕಿದ್ದ ಕಾರ್ಮಿಕರಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ವರದಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com